ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿದವರ ವಿರುದ್ದ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದರಾಯನಪುರದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯಸಿದ ಅವರು ಇಂತಹ ರಾಕ್ಷಸೀ ಪ್ರವೃತ್ತಿಯನ್ನು ಸರ್ಕಾರ ಸಹಿಸಲ್ಲ. ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡುವ ಜತೆಗೆ ಕಿಡಿಗೇಡಿಗಳು ಹಾಗೂ ಗೂಂಡಾಗಿರಿ ಪ್ರವೃತ್ತಿಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದು ಹೇಳಿದರು.