ಗೋಲ್ಡನ್ ಅವರ್‌ನಲ್ಲಿ ಎಚ್ಚೆತ್ತುಕೊಳ್ಳದಿದ್ರೆ ಪರ್ಮನೆಂಟ್ ಬೆಡ್ ಮೇಲೆ ಮಲಗುತ್ತಿದ್ದೆ-H.D ಕುಮಾರಸ್ವಾಮಿ

ಡಿಸ್ಚಾರ್ಜ್‌ ಬಳಿಕ H.D ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಠಿ..!

ಮಾಜಿ ಸಿಎಂ H.D ಕುಮಾರಸ್ವಾಮಿಯವರು ಅನಾರೋಗ್ಯದ ಹಿನ್ನೆಲೆ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಡಿಸ್ಚಾರ್ಜ್‌ ಆಗುತ್ತಿದಂತೆ. H.D ಕುಮಾರಸ್ವಾಮಿಯವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕ ಧಿಡೀರ್‌  ಸುದ್ದಿಗೋಷ್ಠಿಯನ್ನು ನಡೆಸಿದ್ರು.

ಇನ್ನೂ ಈ ವೇಳೆ ಮಾತನಾಡಿದ H.D ಕುಮಾರಸ್ವಾಮಿಯವರು,ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ.

ತಂದೆ-ತಾಯಿ‌ ಆಶೀರ್ವಾದದಿಂದ ಪುನರ್​ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್​ಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ.

ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಡಿಸ್ಚಾರ್ಜ್ ಬಳಿಕ ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಹೇಳಿದರು.

ಎರಡನೇ ಬಾರಿ ನನಗೆ ಪಾರ್ಶ್ವವಾಯು ಆಗಿದೆ. ಈ ಬಾರಿ ಪಾರ್ಶ್ವವಾಯುವಾದಾಗ ಹೆಚ್ಚು ಡ್ಯಾಮೇಜ್ ಆಗಿದೆ. ಭಗವಂತನ ದಯೆಯಿಂದ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಪಾರ್ಶ್ವವಾಯು ಆದಾಗ ಒಂದು ಕ್ಷಣವೂ ವ್ಯರ್ಥ ಮಾಡಬೇಡಿ. ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಆದರೇ ಕೂಡಲೇ ಚಿಕಿತ್ಸೆ ಕೊಡಿಸಿ. ಹಣದ ಬಗ್ಗೆ ಯೋಚಿಸಬೇಡಿ, ಜೀವ ಉಳಿಸಿ. ನಾನು ನಿರ್ಲಕ್ಷ್ಯ ಮಾಡಿದ್ದರೇ ಬೆಡ್ ಮೇಲೆಯೇ ಇರಬೇಕಾಗಿತ್ತು. ನಾಲ್ಕು ಜನಕ್ಕೆ ಸಹಾಯ ಮಾಡಿದ್ದಕ್ಕೆ ಭಗವಂತ ಉಳಿಸಿದ್ದಾನೆ. ಯಾರೂ ಸಹ ಪಾರ್ಶ್ವವಾಯುವನ್ನು ನಿರ್ಲಕ್ಷಿಸಬೇಡಿ ಎಂದು ಹೆಚ್​ ಡಿ ಕುಮಾರಸ್ವಾಮಿ  ಮನವಿ ಮಾಡಿಕೊಂಡರು.

Please follow and like us:

tmadmin

Leave a Reply

Your email address will not be published. Required fields are marked *

Next Post

ಆರಂಭವಾಯಿತು ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸುತ್ತಿರುವ "ಗೌರಿ" ಸಿನಿಮಾ..!

Sun Sep 3 , 2023
ಇದು ಇಂದ್ರಜಿತ್ ಲಂಕೇಶ್ ನಿರ್ದೇಶನದ ಚಿತ್ರ ಹಿರಿಯ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ, ಇಂದ್ರಜಿತ್‍ ಲಂಕೇಶ್‍ ಅವರ ಮಗ ಸಮರ್ಜಿತ್ ಲಂಕೇಶ್‍ ನಾಯಕರಾಗಿ ನಟಿಸುತ್ತಿರುವ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಈ ಚಿತ್ರದ ಮೂಲಕ ಸಮರ್ಜಿತ್ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಸವನಗುಡಿ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನೆರವೇರಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಿತ್ರದ […]

Advertisement

Wordpress Social Share Plugin powered by Ultimatelysocial