ಗ್ರಾಮಕ್ಕೆ ಜಿಲ್ಲಾಧ್ಯಕ್ಷ ಸುರೇಶ್ ಭೇಟಿ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ನಾಗೇನಹಳ್ಳಿ ಗ್ರಾಮ ಸೀಲ್ ಡೌನ್ ಮಾಡಲಾಗಿದೆ. ಈಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಅವರು ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು ಬೇಲೂರು ವಿಧಾನಸಭಾ ಕ್ಷೇತ್ರದ ನಾನಾಕಡೆ  ಸೀಲ್  ಡೌನ್  ಆದ ಊರಿನ ಜನರಿಗೆ ಪಡಿತರ ಕಿಟ್ ನೀಡುವ ಮೂಲಕ  ಧೈರ್ಯ ತುಂಬುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೊಂದಿಗೆ  ಇಂದು ಅರಸೀಕೆರೆ ತಾಲ್ಲೂಕಿನ ಹೋಬಳಿಯ ನಾಗೇನಹಳ್ಳಿ  ಗ್ರಾಮದಲ್ಲಿ ಕಿಟ್ ವಿತರಣೆ ಮಾಡಿದ್ದೇವೆ ಎಂದರು. ಹಾಗೆಯೇ ಬಹಳ ದಿನಗಳಿಂದ ಚರಂಡಿ ನೀರು ನಿಂತು  ಬಹಳ ತೊಂದರೆಯಾಗುತ್ತಿದೆ ಎಂದು ಓರ್ವ ಮಹಿಳೆ ಕೇಳಿಕೊಂಡರು. ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ  ಬಗೆಹರಿಸುವಂತೆ  ಸೂಚಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

೧ ದಿನದ ಹಸುಗೂಸಿಗೆ ಕೊರೊನಾ..!

Wed Jul 1 , 2020
ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಿದೆ. ಹುಬ್ಬಳ್ಳಿ ತಾಲ್ಲೂಕಿನ ಉಮಚಗಿ ಗ್ರಾಮದ ಗರ್ಭಿಣಿಗೆ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಆಕೆಗೆ ಶಸ್ತ್ರಚಿಕಿತ್ಸೆ ಮಾಡಿ ಹೆರಿಗೆ ಮಾಡಿಸಲಾಗಿದ್ದು, ಇದರಲ್ಲಿ ಕಿಮ್ಸ್ ವೈದ್ಯರ ತಂಡ ಯಶಸ್ವಿಯಾಗಿದೆ. ಆದರೆ ಹುಟ್ಟಿದ ಒಂದು ದಿನಕ್ಕೇ ಮಗುವಿಗೂ ಕೂಡ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯಕ್ಕೆ ಗರ್ಭಿಣಿ ಮಹಿಳೆ ಮತ್ತು ಮಗುವಿಗೆ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.             […]

Advertisement

Wordpress Social Share Plugin powered by Ultimatelysocial