ನವದೆಹಲಿ : ಕೇಂದ್ರ ಸರ್ಕಾರದಿಂದ ಮೇ.೩ರವರೆಗೆ ಘೋಷಣೆಯಾಗಿದ್ದಂತ ಲಾಕ್ ಡೌನ್ ಗೆ ಇದೀಗ ಇಂದಿನಿಂದಲೇ ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ವೃದ್ಧಿಗೆ ಕ್ರಮ ಕೈಗೊಳ್ಳುವಂತ ತಿರ್ಮಾನವನ್ನು ಕೈಗೊಳ್ಳಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುನಿಯಾ ಶ್ರೀವಾಸ್ತವ, ಕೇಂದ್ರದಿಂದ ಲಾಕ್ ಡೌನ್ ಮತ್ತಷ್ಟು ಸಡಿಲ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ರ್ಥಿಕ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆಗೆ ಮತ್ತಷ್ಟು ಆದ್ಯತೆ ನೀಡಲಾಗುತ್ತಿದೆ ಎಂದರು.
ಇನ್ನೂ ಎಲೆಕ್ಟ್ರಾನಿಕ್ಸ್ ವಸ್ತುಗಳ ಅಂಗಡಿ ಓಪನ್ ಗೆ ಅವಕಾಶ ಮಾಡಿಕೊಡಲಾಗಿದೆ. ರಸಗೊಬ್ಬರ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ. ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಇದಲ್ಲದೇ ಕೊರೋನಾ ಸೋಂಕು ತಡೆಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಗ್ರಾಮೀಣ ಭಾಗದ ಅಭಿವೃದ್ಧಿಗೆ ಕ್ರಮ
Please follow and like us: