ಗ್ರೀನ್ ಜೋನ್ ಅನ್ನು ರೆಡ್ ಝೋನ್ ಮಾಡುತ್ತಿದ್ದಾರೆ: ಡಿ.ಕೆ‌.ಸುರೇಶ್

ಬೆಂಗಳೂರುಪಾದರಾಯನಪುರ ಕೊರೊನಾ‌ ಸೋಂಕಿತ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿದ್ದು ಸರಿಯಲ್ಲ ಎಂದು ಸಂಸದ ಡಿ.ಕೆ‌.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜೈಲಿನಲ್ಲಿ 177 ಖೈದಿಗಳಿದ್ದರು. ಪಾದರಾಯನಪುರ ಸೋಂಕಿತರಿಗಾಗಿ ಖೈದಿಗಳನ್ನು ಜೈಲಿನಿಂದ ಸ್ಥಳಾಂತರ ಮಾಡಿಸಿದ್ದಾರೆ. ಪಾದರಾಯನಪುರ ಬಂಧಿತರನ್ನು ರಾಮನಗರದಲ್ಲಿ ಕ್ವಾರಂಟೈನ್ ಮಾಡಿದ್ದೇಕೆ?. ರಾಮನಗರ ಗ್ರೀನ್ ಝೋನ್ ನಲ್ಲಿದೆ. ಆದ್ದರಿಂದ ಇಲ್ಲಿಗೆ ಸ್ಥಳಾಂತರ ಬೇಡ ಎಂದು ಹೇಳಿದ್ದೆವು. ಆದರೂ ಸಹ ಬಿಜೆಪಿಯವರು ಉದ್ದೇಶಪೂರ್ವಕವಾಗಿ ರಾಮನಗರ ಜಿಲ್ಲೆಗೆ ಸೋಂಕು ಅಂಟಿಸುವ ಕೆಲಸ ಮಾಡುತ್ತಿದ್ದಾರೆ.  ರಾಮನಗರ ಜೈಲಿಗೆ ತಂದು ಹಾಕಿರುವವರಲ್ಲಿ ಈಗ ಪಾಸಿಟೀವ್ ಬಂದಿದೆ. ಗ್ರೀನ್ ಜೋನ್ ಅನ್ನು ರೆಡ್ ಝೋನ್ ಮಾಡುತ್ತಿದ್ದಾರೆ. ರಾಮನಗರದಿಂದ ಸೋಂಕಿತರನ್ನು ಬೇರೆಡೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಮನವಿ ಬಂದಿದೆ ಎನ್ನುತ್ತಿದೆ. ಆರೋಪಿಗಳನ್ನು ಬರೀ ಸ್ಥಳಾಂತರ ಮಾಡಿದಷ್ಟೇ ಸಾಲದು. ಜೈಲಿನ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಬೇಕು ಎಂದು ಹೇಳಿದರು

 

Please follow and like us:

Leave a Reply

Your email address will not be published. Required fields are marked *

Next Post

ಬಡವರಿಗೆ ತಲುಪಬೇಕಾದ ಅಕ್ಕಿ ತಮಿಳುನಾಡಿನ ಪಾಲಾಗುತ್ತಿದೆ:ಡಿ.ಕೆ.ಶಿವಕುಮಾರ್

Fri Apr 24 , 2020
ಬಡವರಿಗೆ ತಲುಪಬೇಕಾದ ಅಕ್ಕಿ ತಮಿಳುನಾಡಿನ ಪಾಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ  ಅವರು, ಅಕ್ಕಿ ಗೋಲ್‌ಮಾಲ್ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆಯೇ ಇಲ್ಲವೋ ಎಂಬುದು ತಿಳಿದಿಲ್ಲ. ಹರಿಯಾಣದಿಂದ ಬಂದ ಅಕ್ಕಿಯನ್ನು ತಮಿಳುನಾಡಿನ ಹೊಸೂರು ವ್ಯಾಪಾರಿಗೆ ಮಾರಾಟ ಮಾಡಲಾಗಿದೆ. ಇದನ್ನು ಬಿಜೆಪಿಯ ಸಕ್ರಿಯ ನಾಯಕರೇ ವ್ಯಾಪಾರ ಮಾಡಿದ್ದಾರೆ. ಆಹಾರ ಕಾಯಿದೆಗೆ ಒಂದು ನಿಯಮ ಇದೆ. ಕಾನೂನು ಬಾಹಿರವಾಗಿ ಅಕ್ಕಿ ಮಾರಟ ಮಾಡಿದವರ ಮೇಲೆ ಸರ್ಕಾರ […]

Advertisement

Wordpress Social Share Plugin powered by Ultimatelysocial