ಚಿರಂಜೀವಿ ಚಿತ್ರದಿಂದ ಕಾಜಲ್ ಔಟ್..!

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಈ ಸಿನಿಮಾದ ಮೇಲೆ ಚಿರಂಜೀವಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ನಾಯಕಿಯಾಗಿ ಕಾಜಲ್ ಅಗರ್‌ವಾಲ್ ನಟಿಸೋದು ಫಿಕ್ಸ್ ಆಗಿತ್ತು. ಆದರೆ ಕಾಜಲ್ ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನೋ ಸುದ್ದಿ ಹೊರಬಿದ್ದಿದೆ.  ನಟಿ ಕಾಜಲ್ ಅಗರ್‌ವಾಲ್ ಚಿರಂಜೀವಿ ಚಿತ್ರದಲ್ಲಿ ನಟಿಸೋದು ಪಕ್ಕಾ ಆಗಿತ್ತು. ಆದರೆ ಈಗ ಕಾಜಲ್‌ಗೆ ಬೇರೊಂದು ಬಿಗ್ ಬಜೆಟ್ ಸಿನಿಮಾಗೆ ಸಹಿ ಮಾಡಿ ಮುಂಗಡ ಹಣ ಪಡೆದಿದ್ದಾರಂತೆ. ಡೇಟ್ ಕ್ಲಾö್ಯಶ್ ಆಗುವ ಕಾರಣ ಆಚಾರ್ಯ ಸಿನಿಮಾ ಕೈ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.  ನಟಿ ಕಾಜಲ್ ಅಗರ್‌ವಾಲ್ ಜಾಗಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದ ಮತ್ತೋರ್ವ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರಂತೆ. ಅನುಷ್ಕಾ ಹೆಸರು ಮೊದಲಿನಿಂದ ಕೇಳಿಬರುತ್ತಿತ್ತು. ಆದರೆ ಕಾಜಲ್ ಆಯ್ಕೆಯಾದ ಕಾರಣ ಅನುಷ್ಕಾ, ಆಚಾರ್ಯ ಸಿನಿಮಾದಿಂದ ದೂರ ಉಳಿದಿದ್ರು, ಆದರೀಗ ಮತ್ತೆ ಚಿರಂಜೀವಿ ಜೊತೆ ಅನುಷ್ಕಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ವಿಮೆ..!

Sat May 2 , 2020
ಮಹಾರಾಷ್ಟ್ರ: ದೇಶದಲ್ಲಿ ಡೆಡ್ಲಿ ವೈರಸ್ ಕೊರೊನಾ ಆರ್ಭಟ ಜೋರಾಗಿದೆ. ಅತಿ ಹೆಚ್ಚು ಪ್ರಕರಣ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿವೆ. ಇದರ ಮಧ್ಯೆ ಅಲ್ಲಿನ ಸರ್ಕಾರ ಮಹತ್ವದ ಆದೇಶ ಹೊರಹಾಕಿದೆ. ರಾಜ್ಯದಲ್ಲಿನ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ಮಾಡಿಸಲು ನಿರ್ಧಾರ ಕೈಗೊಂಡಿರುವ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ, ಮಹಾತ್ಮ ಜ್ಯೋತಿಬಾ ಪುಲೆ ಜನ್ ಆರೋಗ್ಯ ಯೋಜನೆ ಅಡಿ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ […]

Advertisement

Wordpress Social Share Plugin powered by Ultimatelysocial