ಜನವರಿ 28 ರಂದು ಬಿಹಾರ ಬಂದ್

 

ಪಾಟ್ನಾ, ಜನವರಿ 27: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯ NTPC ಮೊದಲ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ಉದ್ಯೋಗಾಕಾಂಕ್ಷಿಗಳು ಮಾಡುತ್ತಿರುವ ಆರೋಪಗಳ ಕುರಿತು ಪರಿಶೀಲನೆಗೆ ಕೇಂದ್ರ ರೈಲ್ವೇ ಸಚಿವಾಲಯ ರಚಿಸಿರುವ ಸಮಿತಿಯಲ್ಲೇ ವಂಚನೆಯಿದೆ ಎಂಬ ಆರೋಪ ಕೇಳಿ ಬಂದಿದೆ.

ಕೇಂದ್ರ ಸರ್ಕಾರದ ಸಮಿತಿ ರಚನೆ ಹೊರತಾಗಿಯೂ ವಿದ್ಯಾರ್ಥಿ ಸಂಘ AISA ಮತ್ತು ಇತರ ಯುವ ಸಂಘಟನೆಗಳು ಶುಕ್ರವಾರ “ಬಿಹಾರ ಬಂದ್”ಗೆ ಕರೆ ನೀಡಿವೆ. ಕೇಂದ್ರ ರೈಲ್ವೆ ಸಚಿವಾಲಯವು ರಚಿಸಿರುವ ಸಮಿತಿಯು ಉತ್ತರ ಪ್ರದೇಶದ ಚುನಾವಣೆಯವರೆಗೆ ವಿಷಯವನ್ನು ಮುಂದೂಡುವ “ಪಿತೂರಿ” ಎಂದು AISA ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸಂದೀಪ್ ಸೌರವ್ ದೂಷಿಸಿದ್ದಾರೆ.

ರೈಲ್ವೇ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಗಲಾಟೆ, ಕಲ್ಲು ತೂರಾಟ, ರೈಲಿಗೆ ಬೆಂಕಿ

ಬಿಹಾರದ ಗಯಾದಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಆಗಿದೆ. ಚಲಿಸುವ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ನಿಂತಿದ್ದ ರೈಲಿಗೆ ಕೆಲವರು ಬೆಂಕಿ ಹಚ್ಚಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಇದರ ಮಧ್ಯೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

WI vsENG:ವಿಂಡೀಸ್ ಮೂರನೇ T20 ನಲ್ಲಿ ಇಂಗ್ಲೆಂಡ್ ವಿರುದ್ಧ ,ಪೊವೆಲ್ 51 ಎಸೆತಗಳ ಶತಕ;

Thu Jan 27 , 2022
ಎರಡನೇ ಪಂದ್ಯದಲ್ಲಿ ಒಂದು ರನ್‌ನಿಂದ ಸೋತ ನಂತರ, ಆತಿಥೇಯರು 20 ಓವರ್‌ಗಳಲ್ಲಿ 53 ಎಸೆತಗಳಲ್ಲಿ 10 ಸಿಕ್ಸರ್‌ಗಳು ಮತ್ತು ನಾಲ್ಕು ಬೌಂಡರಿಗಳನ್ನು ಒಳಗೊಂಡಂತೆ 224-5 ರನ್ನುಗಳ ಸವಾಲಿನ ಮೊತ್ತವನ್ನು ದಾಖಲಿಸಿದರು. ರೋವ್‌ಮನ್ ಪೊವೆಲ್ ಮತ್ತು ನಿಕೋಲಸ್ ಪೂರನ್ ಅವರ ಅರ್ಧಶತಕದ ಬಿರುಸಿನ 107 ರನ್‌ಗಳ ನೆರವಿನಿಂದ ವೆಸ್ಟ್ ಇಂಡೀಸ್ ಬುಧವಾರ ಬ್ರಿಡ್ಜ್‌ಟೌನ್‌ನಲ್ಲಿ ಇಂಗ್ಲೆಂಡ್ ವಿರುದ್ಧ 20 ರನ್‌ಗಳ ಜಯ ಸಾಧಿಸಿತು ಮತ್ತು ಐದು ಪಂದ್ಯಗಳ ಟ್ವೆಂಟಿ 20 ಅಂತರರಾಷ್ಟ್ರೀಯ ಸರಣಿಯಲ್ಲಿ […]

Advertisement

Wordpress Social Share Plugin powered by Ultimatelysocial