ರಾಜ್ಯದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬಹುತೇಕ ರಾಜ್ಯದ ಸಿಎಂಗಳು ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಸಬೇಕೆಂದು ಪ್ರಸ್ತಾಪಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೆಚ್ಚದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ಸಿಕ್ಕಿಲ್ಲ. ಜಾಗೃತಿ ವಹಿಸಬೇಕಿದೆ. ಕೊರೊನಾಗೆ ಮದ್ದಿಲ್ಲ. ಇದಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಒಂದೆರಡು ದಿನದಲ್ಲಿ ಕಡಿಮೆಯಾಗುವ ರೋಗವಲ್ಲ. ಸುಮಾರು ದಿನ ಮುಂದುವರಿಯಲಿದೆ ಎಂದು ಹೇಳಿದ್ದಾರೆ.