ರಾಮನಗರ: ರಾಮನಗರದ ಜಾನಪದ ಲೋಕವು ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ರಾಮನಗರ ಜಿಲ್ಲೆಯ ಜಾನಪದ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿದೆ. ಇಂದು ಜಾನಪದ ಲೋಕದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸುಮಾರು 110 ಜನ ಜಾನಪದ ಕಲಾವಿದರಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು. ರಾಜ್ಯದ ಬೇರೆ ಜಿಲ್ಲೆಗಳ ಜಾನಪದ ಕಲಾವಿದರಿಗೂ ದಿನಸಿ ಕಿಟ್ ವಿತರಣೆ ಮಾಡಲಾಗುವುದು ಎಂದು ಜಾನಪದ ಲೋಕ ಅಡಳಿತ ಮಂಡಳಿ ತಿಳಿಸಿದೆ.
Please follow and like us:
Sat May 30 , 2020
ಮುಂಬಯಿ: ಕೋವಿಡ್-19 ರೋಗಿಗಳಿಗೆ ಐಸೋಲೇಷನ್ ಕೇಂದ್ರವಾಗಿ ಬಳಸಿಕೊಳ್ಳಲು ಬಾಲಿವುಡ್ ನಟ ಶಾರೂಖ್ ಖಾನ್ ಅವರು ಮುಂಬಯಿಯ ಸಿಡಿ ಮಾರ್ಗ್ನಲ್ಲಿರುವ ತಮ್ಮ ಒಡೆತನದ ನಾಲ್ಕು ಮಹಡಿಗಳ ಕಟ್ಟಡವನ್ನು ಬಿಟ್ಟುಕೊಟ್ಟಿದ್ದರೂ, ವೈದ್ಯರ ಕೊರತೆಯಿಂದಾಗಿ ಅದು ಬಳಕೆಯೇ ಆಗದಿರುವುದು ಬೆಳಕಿಗೆ ಬಂದಿದೆ.ಶಾರೂಖ್ ದಂಪತಿ ಏ.24ರಂದೇ ಈ ಕಟ್ಟಡವನ್ನು ಬೃಹನ್ಮುಂಬಯಿ ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದ್ದರು. ಅಲ್ಲದೇ ಶಾರೂಖ್ ಅವರ ‘ಮೀರ್ ಫೌಂಡೇಷನ್’ ಎನ್ಜಿಒ ಇಲ್ಲಿ22 ಬೆಡ್ಗಳ ವ್ಯವಸ್ಥೆಯನ್ನೂ ಮಾಡಿತ್ತು. ಆದರೆ ಪಾಲಿಕೆಯ ಬೇಜವಾಬ್ದಾರಿಯಿಂದ ಇಲ್ಲಿ ವೈದ್ಯರ […]