ಜಿಲ್ಲಾಡಳಿತ ಭವನ ಸೀಲ್‌ಡೌನ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನವನ್ನು ಒಂದು ದಿನದ ಮಟ್ಟಿಗೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್ ಮಾಡಲಾಗಿದೆ.ಸಂಪೂರ್ಣ ಸೀಲ್‌ಡೌನ್ ಮಾಡಿರುವ ಅವಧಿಯಲ್ಲಿ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರು ಕಛೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದವರು ತಮ್ಮ ಮನೆಯಿಂದಲೇ ತುರ್ತು ಸಂದರ್ಭದಲ್ಲಿ ಕರ್ತವ್ಯ ವನ್ನು ನಿರ್ವಹಿಸಲು ಆದೇಶಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಆಭರಣ ಪ್ರಿಯರಿಗೆ ಮತ್ತೆ ಶಾಕ್

Fri Jul 3 , 2020
ಆಭರಣ ಪ್ರಿಯರಿಗೆ ಮತ್ತೆ ಎದುರಾಯ್ತು ಬೆಲೆ ಏರಿಕೆಯ ಶಾಕ್. ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ  ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ಬೆಲೆ 4,568 ರೂ ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 45,680 ರೂ ತಲುಪಿದೆ.  ಬೆಳ್ಳಿ ಬೆಲೆ 1 ಕೆಜಿಗೆ 48,610 ರೂ ಆಗಿದೆ. ಹಾಗೆ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ದರವು 10 ಗ್ರಾಮ್ ಗೆ 47,160 ರೂ ಇದ್ದರೆ ಬೆಳ್ಳಿ […]

Advertisement

Wordpress Social Share Plugin powered by Ultimatelysocial