ಜಿಲ್ಲೆಯನ್ನು ಲಾಕ್‌ಡೌನ್ ಮಾಡುವಂತೆ ಸಾರಾ ಮಹೇಶ್ ಮನವಿ

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಪ್ರಕರಣಗಳು ನಿಲ್ಲುತ್ತಿಲ್ಲ. ಹೀಗಾಗಿ ಮೈಸೂರು ಜಿಲ್ಲೆಯನ್ನೂ ಲಾಕ್ ಡೌನ್ ಮಾಡಬೇಕೆಂದು ಮಾಜಿ ಸಚಿವ ಸಾರಾ ಮಹೇಶ್ ಸಿಎಂ ಗೆ ಪತ್ರ ಬರೆದಿದ್ದಾರೆ. ಹೌದು ಕೋವಿಡ್-೧೯ ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೧೦೯೧ ಪ್ರಕರಣಗಳು ವರದಿಯಾಗಿದ್ದು, ೪೧ ಸಾವುಗಳಾಗಿವೆ. ಹಾಗೂ ಜುಲೈ ೮ರಿಂದ ೧೪ರ ಅವಧಿಯಲ್ಲಿ ಒಟ್ಟು ೫೬೩ ಪ್ರಕರಣಗಳು ವರದಿಯಾಗಿದ್ದು, ೨೯ ಕೋವಿಡ್-೧೯ ಸಂಬಂಧಿತ ಸಾವುಗಳಾಗಿವೆ. ಹೀಗಾಗಿ ಮೈಸೂರು ಜಿಲ್ಲೆಯನ್ನು ಲಾಕ್ ಡೌನ್ ಮಾಡಬೇಕು ಎಂದು ಸಾರಾ ಮಹೇಶ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸಾರಿಗೆ ಸಂಸ್ಥೆಯ ಮೇಲಾಧಿಕಾರಿಗಳ ವಿರುದ್ಧ ದೂರು

Wed Jul 15 , 2020
ಬೀದರ ಜಿಲ್ಲೆಯಲ್ಲಿ ಸಾರಿಗೆ ಸಂಸ್ಥೆಯ ಮೇಲಾಧಿಕಾರಿಗಳ ದುರ್ನಡತೆ ಬಗ್ಗೆ ಸಚಿವರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ನೌಕರರು ದೂರು ನೀಡಿದ್ದಾರೆ. ಇಂದು ಸಚಿವ ಪ್ರಭು ಚೌಹಾಣ್, ಔರಾದ ಪಟ್ಟಣದ ಪೊಲೀಸ ಠಾಣೆ ಮತ್ತು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸಾರಿಗೆ ನೌಕರರಿಗೆ ಮಾಸ್ಕ್ ವಿತರಿಸಿದರು .ಈ ಸಂಧರ್ಭದಲ್ಲಿ ಔರಾದ ತಾಲ್ಲೂಕು ಘಟಕದ ಸಾರಿಗೆ ಸಂಸ್ಥೆ ನೌಕರರ ಸಂಘದ ಅಧ್ಯಕ್ಷರು ಕರೋನಾ ವೈರಸ್ ನಿಂದ ಲಾಕ್‌ಡೌನ್ ಸಡಿಲಿಕೆ ಆದನಂತರ, ಸಾರಿಗೆ ಸಂಸ್ಥೆ ಅಧಿಕಾರಿಗಳು […]

Advertisement

Wordpress Social Share Plugin powered by Ultimatelysocial