ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಪ್ರಕರಣಗಳು ನಿಲ್ಲುತ್ತಿಲ್ಲ. ಹೀಗಾಗಿ ಮೈಸೂರು ಜಿಲ್ಲೆಯನ್ನೂ ಲಾಕ್ ಡೌನ್ ಮಾಡಬೇಕೆಂದು ಮಾಜಿ ಸಚಿವ ಸಾರಾ ಮಹೇಶ್ ಸಿಎಂ ಗೆ ಪತ್ರ ಬರೆದಿದ್ದಾರೆ. ಹೌದು ಕೋವಿಡ್-೧೯ ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೧೦೯೧ ಪ್ರಕರಣಗಳು ವರದಿಯಾಗಿದ್ದು, ೪೧ ಸಾವುಗಳಾಗಿವೆ. ಹಾಗೂ ಜುಲೈ ೮ರಿಂದ ೧೪ರ ಅವಧಿಯಲ್ಲಿ ಒಟ್ಟು ೫೬೩ ಪ್ರಕರಣಗಳು ವರದಿಯಾಗಿದ್ದು, ೨೯ ಕೋವಿಡ್-೧೯ ಸಂಬಂಧಿತ ಸಾವುಗಳಾಗಿವೆ. ಹೀಗಾಗಿ ಮೈಸೂರು ಜಿಲ್ಲೆಯನ್ನು ಲಾಕ್ ಡೌನ್ ಮಾಡಬೇಕು ಎಂದು ಸಾರಾ ಮಹೇಶ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯನ್ನು ಲಾಕ್ಡೌನ್ ಮಾಡುವಂತೆ ಸಾರಾ ಮಹೇಶ್ ಮನವಿ
Please follow and like us: