ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಿನೆದಿನೆ ಏರಿಕೆಯಾಗುತ್ತಲೇ ಇದ್ದು, ಜನತೆಗೆತೊಂದರೆಯಾಗುತ್ತಿದೆ. ಆದರಿಂದ ಕೇಂದ್ರ ಸರ್ಕಾರದ ಕಚೇರಿ ಬಳಿ ಸಾಮಾಜಿಕ ಆಂತರ ಕಾಯ್ದುಕೊಂಡು ಜೂನ್ 29ರಂದು ಕಾಂಗ್ರೆಸ್ ನಿಂದ ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಕೊರೊನಾ ಚಿಕಿತ್ಸೆಗೆ ಜನತೆಯಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಜೂನ್ 30ರಿಂದ ಜುಲೈ 4ರ ವರೆಗೆ ಎಲ್ಲ ತಾಲ್ಲೂಕು ಕೇಂದ್ರ ಗಳಲ್ಲಿ ಧರಣಿ ನಡೆಸಲಾಗುವುದು ನಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.