ವಾರಣಾಸಿ : ಜ್ಞಾನವಾಪಿ ಮಸೀದಿ ಆವರಣದ ವಿಡಿಯೋಗ್ರಫಿ ನಡೆಸುತ್ತಿರುವ ಸಮೀಕ್ಷಾ ತಂಡಕ್ಕೆ ಸಮೀಕ್ಷೆಯ ಸಮಯದಲ್ಲಿ ಪತ್ತೆಯಾದ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಲ್ಲಿಸುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನಿರ್ದೇಶನ ನೀಡಿದೆ. ಈ ವಸ್ತುಗಳನ್ನು ಸಂರಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
“ಆಯೋಗದ ವಿಚಾರಣೆ ಅಥವಾ ಎಎಸ್ಐ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಐತಿಹಾಸಿಕ ಪುರಾವೆಗಳು ಅಥವಾ ಇತರ ಯಾವುದೇ ಪುರಾವೆಗಳ ಉದ್ದೇಶಕ್ಕಾಗಿ ಸಲ್ಲಿಸಿದ ಎಲ್ಲಾ ಅರ್ಜಿಗಳ ಬಗ್ಗೆ, ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಐತಿಹಾಸಿಕ ಮಹತ್ವವನ್ನ ಹೊಂದಿರುವ ಎಲ್ಲಾ ವಸ್ತುಗಳ ಪಟ್ಟಿಯನ್ನ ಸಿದ್ಧಪಡಿಸಲು ಮತ್ತು ಸಂರಕ್ಷಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ನಿರ್ದೇಶನ ನೀಡಿದೆ. ಪಟ್ಟಿಯ ಪ್ರತಿಯನ್ನ ನ್ಯಾಯಾಲಯ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ” ಎಂದು ಹಿಂದೂ ಪಕ್ಷವನ್ನ ಪ್ರತಿನಿಧಿಸುವ ವಕೀಲ ಅನುಪಮ್ ದ್ವಿವೇದಿ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ