ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಂಬೈಯಲ್ಲಿನ ಮನೆ ರಾಜ್ಗೃಹ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಈ ಹಿನ್ನೆಲೆ ತೀವ್ರವಾಗಿ ಖಂಡಿಸಿರುವ ದಲಿತ ಸಂಘರ್ಷ ಸಮಿತಿ, ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಅವರನ್ನು ದೇಶದಿಂದಲೇ ಗಡಿಪಾರು ಮಾಡಬೇಕೆಂದು ಸಮಿತಿಯ ಬೆಂಗಳೂರು ವಿಭಾಗೀಯ ಸಂಚಾಲಯ ಮಂಜುನಾಥ ಅಣ್ಣಯ್ಯ ಆಗ್ರಹಿಸಿದ್ದಾರೆ. ದಾಳಿ ವೇಳೆ ದುಷ್ಕರ್ಮಿಗಳು ಮನೆಯಲ್ಲಿನ ಸಿಸಿಟಿವಿ ಕ್ಯಾಮರ, ಕಿಟಕಿ ಗಾಜುಗಳನ್ನು ಪುಡಿಮಾಡಿದ್ದು, ಹೂವಿನ ಗಿಡಗಳನ್ನು ಧ್ವಂಸ ಮಾಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಸಿಎಂ ಮತ್ತು ಅಲ್ಲಿನ ಗೃಹ ಸಚಿವರು ತಕ್ಷಣವೇ ತಪ್ಪಿತಸ್ಥರ ಬಂಧನಕ್ಕೆ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.