ಡಾ.ಬಿ.ಆರ್.ಅಂಬೇಡ್ಕರ್ ಅವರ ಮನೆ ಮೇಲೆ ದಾಳಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಂಬೈಯಲ್ಲಿನ ಮನೆ ರಾಜ್‍ಗೃಹ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಈ ಹಿನ್ನೆಲೆ ತೀವ್ರವಾಗಿ ಖಂಡಿಸಿರುವ ದಲಿತ ಸಂಘರ್ಷ ಸಮಿತಿ, ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಅವರನ್ನು ದೇಶದಿಂದಲೇ ಗಡಿಪಾರು ಮಾಡಬೇಕೆಂದು ಸಮಿತಿಯ ಬೆಂಗಳೂರು ವಿಭಾಗೀಯ ಸಂಚಾಲಯ ಮಂಜುನಾಥ ಅಣ್ಣಯ್ಯ ಆಗ್ರಹಿಸಿದ್ದಾರೆ. ದಾಳಿ ವೇಳೆ ದುಷ್ಕರ್ಮಿಗಳು ಮನೆಯಲ್ಲಿನ ಸಿಸಿಟಿವಿ ಕ್ಯಾಮರ, ಕಿಟಕಿ ಗಾಜುಗಳನ್ನು ಪುಡಿಮಾಡಿದ್ದು, ಹೂವಿನ ಗಿಡಗಳನ್ನು ಧ್ವಂಸ ಮಾಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಸಿಎಂ ಮತ್ತು ಅಲ್ಲಿನ ಗೃಹ ಸಚಿವರು ತಕ್ಷಣವೇ ತಪ್ಪಿತಸ್ಥರ ಬಂಧನಕ್ಕೆ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ

Thu Jul 9 , 2020
ಕೋವಿಡ್-೧೯ ಸೋಂಕು ಕಾರಣದಿಂದ ಸ್ಥಬ್ಧವಾಗಿದ್ದ ಕ್ರಿಕೆಟ್ ಎಚ್ಚೆತ್ತಿದೆ. ಆದರೆ ವಿಶ್ವ ಕ್ರಿಕೆಟ್ ಕಾತರದಿಂದ ಕಾಯುತ್ತಿದ್ದ ಟೆಸ್ಟ್ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಇಂಗ್ಲೆAಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದ ಆಟ ಕೇವಲ ೧೭.೪ ಓವರ್ ಗೆ ಸೀಮಿತವಾಯಿತು. ಸೌಥಂಪ್ಟನ್ ನ ಏಜಸ್ ಬೌಲ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ಆರಂಭಕ್ಕೂ ಮೊದಲೇ ಮಳೆ ಆರಂಭವಾಗಿತ್ತು. ಸ್ವಲ್ಪ ತಡವಾಗಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆAಡ್ ಮೊದಲು […]

Advertisement

Wordpress Social Share Plugin powered by Ultimatelysocial