ಡಿಎಂಕೆ ಸದಸ್ಯನ ಹತ್ಯೆಗೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ

 

ಡಿಎಂಕೆ ಕಾರ್ಯಕರ್ತ ಸೆಲ್ವಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ತಿರುಚ್ಚಿ ಬಳಿ ಇಬ್ಬರನ್ನು ಬಂಧಿಸಲಾಗಿದೆ. ಘಟನೆ ಬಳಿಕ ಇಬ್ಬರು ಚೆನ್ನೈ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಚ್ಚಿಯ ಸಮಯಪುರಂ ಚೆಕ್ ಪೋಸ್ಟ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಆಡಳಿತಾರೂಢ ಡಿಎಂಕೆ ಪಕ್ಷದ ಸದಸ್ಯ ಸೆಲ್ವಂ ಅವರನ್ನು ಚೆನ್ನೈನ ಮಡಿಪಕ್ಕಂನಲ್ಲಿರುವ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ. ಫೆ.1ರ ಮಂಗಳವಾರದಂದು ಸೆಲ್ವಂ ಮನೆಗೆ ಹಾರ ಹಾಕುವ ನೆಪದಲ್ಲಿ ಅಪರಿಚಿತ ತಂಡವೊಂದು ನುಗ್ಗಿ ಕೊಂದಿತ್ತು.

ಇಬ್ಬರು ಆರೋಪಿಗಳನ್ನು ರಾಧಾಕೃಷ್ಣನ್ ಮತ್ತು ಧನಶೀಲನ್ ಎಂದು ಗುರುತಿಸಲಾಗಿದೆ. ಅವರನ್ನು ತಿರುಚ್ಚಿಯ ಸಮಯಪುರಂ ಪ್ರದೇಶದಲ್ಲಿ ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ

Thu Feb 3 , 2022
ಬೆಂಗಳೂರು, ಫೆ.3- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಸಿದಂತೆ ಎಸ್‍ಐಟಿ ತನಿಖಾ ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ.ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ನಡೆಸಿರುವ ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯದಲ್ಲಿ ಅಂತಿಮ ವರದಿ ಸಲ್ಲಿಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ತನಿಖೆ ಪ್ರಶ್ನಿಸಿದ್ದ ಯುವತಿಯ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ […]

Advertisement

Wordpress Social Share Plugin powered by Ultimatelysocial