ಡಿಕೆಶಿಗೆ ತಿರುಗೇಟು ನೀಡಿದ ಈಶ್ವರಪ್ಪ

“ಹೊಸದಾಗಿ ಕೆಪಿಸಿಸಿ ಅಧ್ಯಕ್ಷರಾಗಿರುವುದನ್ನು ತೋರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಈ ರೀತಿ  ನಾಟಕ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ. ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ. ಜನ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಸರ್ಕಾರದ ಜೊತೆ ಇದ್ದಾರೆ. ಡಿ.ಕೆ.ಶಿವಕುಮಾರ್ ಆರೋಪದಲ್ಲಿ ಹುರುಳಿಲ್ಲ” ಎಂದು ಕಿಡಿಕಾರಿದ್ದಾರೆ. “ಕೊರೊನಾ ವಿಚಾರದಲ್ಲಿ ಡಿಕೆಶಿವಕುಮಾರ ವತುಂಬಾ ಡ್ರಾಮಾ ಮಾಡತ್ತಿದ್ದಾರೆ. ಇಷ್ಟು ದಿನ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ ಎಂದು ಕೇಳುವ ಡಿಕೆಶಿ. ಇಷ್ಟು ದಿನ ಅವರು ಎಲ್ಲಿ ಮಲಗಿದ್ರು ಅಂತ ಗೊತ್ತಿದೆ. ನಾನು ಅಲ್ಪ ಸಂಖ್ಯಾತರ ಪರವಾಗಿದ್ದೇನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಎಂದೂ ಕೋಮು ಭಾವನೆ ಸೃಷ್ಟಿಸಲು ಬಿಡುವುದಿಲ್ಲ”. ಇನ್ನೂ  ನರೇಗಾ ಕಾಮಗಾರಿ ಯೋಜನೆ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ಕೇಂದ್ರ ಸಚಿವರು ದೂರು ಕೊಟ್ಟಿರುವುದು ತಪ್ಪು. ಜನರಿಗೆ ನೆರವಾಗುವಂಥ ನರೇಗಾ ಕಾಮಗಾರಿ ನಿಲ್ಲಿಸುವಂತೆ ಮನವಿ ನೀಡಿದ್ದು ತಪ್ಪು. ಪ್ರಧಾನಿ ಮೋದಿ ಅವರೇ ಕಾಮಗಾರಿ ನಡೆಸಲು ಸೂಚಿಸಿದ್ದಾರೆ. 1861 ಕೋಟಿ ಹಣ ನರೇಗಾ ಕಾಮಗಾರಿಗೆ ಬಂದಿದೆ. ಯಾರೊ ಒಬ್ಬರು ಹೇಳಿದರೆಂದು ಕಾಮಗಾರಿ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಹಾಟ್‌ಸ್ಪಾಟ್‌ಗಳಲ್ಲಿ ಲಾಕ್ ಡೌನ್ ಮುಂದುವರಿಕೆ

Mon Apr 27 , 2020
ಹೊಸದಿಲ್ಲಿ: ದೇಶದಲ್ಲಿ ಕೊರೋನ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಜಾರಿಗೊಳಿಸಿರುವ ಲಾಕ್‌ಡೌನ್ ಹಾಟ್‌ಸ್ಪಾಟ್‌ಗಳಲ್ಲಿ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ನಡೆದ ವಿಡಿಯೋ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳಿಗೆ ತಿಳಿಸಿದರು. ಕೋವಿಡ್ -೧೯ಗೆ ಸಂಬಂಧಿಸಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿದ ಪಿಎಂ ಮೋದಿ ಮೇ ೩ಕ್ಕೆ ಎರಡನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದ್ದು, ಬಳಿಕ ದೇಶಾದ್ಯಂತ ಲಾಕ್‌ಡೌನ್ ವಿಸ್ತರಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. Please follow and […]

Advertisement

Wordpress Social Share Plugin powered by Ultimatelysocial