ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಬೆಂಬಲಿಗರು ವೀಕ್ಷಿಸುತ್ತಿದ್ದಾರೆ.ಕಾಂಗ್ರೆಸ್ ಸಂಪ್ರದಾಯದಂತೆ ಧ್ವಜಾರೋಹಣ ಮಾಡಿ ,ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಶುರುವಾಗಿದ್ದು,ಕೆಪಿಸಿಸಿ ಆವರಣದಲ್ಲಿ ಕೇವರ 150 ಗಣ್ಯರಿಗೆ ಮಾತ್ರ ಆಸನದ ವ್ಯವಸ್ಥೆಯಾಗಿದೆ. ಕೆಪಿಸಿಸ ನೂತನ ಕಚೇರಿಯಲ್ಲಿ ಡಿಕೆಶಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಗೆ ಆನೆ ಬಲ ಬಂದಿದ್ದು, ಡಿ.ಕಡ.ಶಿವಕುಮಾರ್ ಅವರ ದರ್ಬಾರ್ ಇಂದಿನಿಂದ ಅಧಿಕೃತವಾಗಿ ಆರಂಭವಾಗಲಿದೆ. ಡಿಕೆಶಿ ಸಾರಥ್ಯದಲ್ಲಿ ಕಾರ್ಯಕರ್ತರು,ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಮತ್ತೆ ಗಟ್ಟಿಗೊಳಿಸುವ ಕಾರ್ಯ ಶುರುವಾಗಲಿದೆ.
ಡಿಕೆಶಿ ಪದಗ್ರಹಣ ಕಾರ್ಯಕ್ರಮ
Please follow and like us: