ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.ಸದ್ಯ ಹೋಂ ಕ್ವಾರಂಟೈನ್ಗೆ ಒಳಗಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆಯುವರು.ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಒದಗಿಸಲಾಗಿದ್ದು, ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುವ ವೇಳೆ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿಟ್ಟುಕೊಳ್ಳುವAತೆ ಸೂಚಿಸಲಾಗಿದೆ. ಆಯಾ ಜಿಲ್ಲೆಯಲ್ಲಿ ಈವರೆಗೂ ಬಂದಿರುವ ಒಟ್ಟು ಕೊರೊನಾ ಪಾಸಿಟಿವ್ ಸಂಖ್ಯೆಗಳು,ಆಸ್ಪತ್ರೆಯಿAದಬಿಡುಗಡೆಯಾಗಿರುವವರು, ಸಕ್ರಿಯ ಪ್ರಕರಣಗಳು, ಸಾವಿನ ಸಂಖ್ಯೆ, ಆಸ್ಪತ್ರೆಗಳ ಸ್ಥಿತಿಗತಿ, ಆಸ್ಪತ್ರೆಯಲ್ಲಿ ಲಭ್ಯವಿರುವ ಹಾಸಿಗೆ ಸಾಮಥ್ರ್ಯ, ವೆಂಟಿಲೇಟರ್, ವೈದ್ಯಕೀಯ ಪರಿಕರಗಳು ಸೋಂಕು ಹರಡಲು ಕಾರಣ ಸೇರಿದಂತೆ ಪ್ರಸ್ತುತ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್
Please follow and like us: