ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನ ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. ಬಾಲಬ್ರೂಯಿಯಲ್ಲಿ ಐಸಿಯು ಟೆಲಿಕಾರ್ಟ್ ಗೆ ರಿಮೋಟ್ ಮೂಲಕ ಆರೋಗ್ಯ ಸಚಿವರು ಚಾಲನೆ ನೀಡಿದರು. ನಂತರ ಮಾತನಾಡಿರುವ ಅವರು, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ ದೂರದಿಂದಲೇ ವೈದ್ಯರು ಸೋಂಕಿತರನ್ನು ಆರೈಕೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.