ತುಂಗಭದ್ರಾ ಜಲಾಶಯದಿಂದ ನೇರ ಬಳ್ಳಾರಿ ನಗರಕ್ಕೆ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು. ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮತ್ತು ಪಾಲಿಕೆ ಸಹಯೋಗದಲ್ಲಿ ನಗರದ ಸತ್ಯನಾರಾಯಣಪೇಟೆಯಲ್ಲಿ ನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ೧೨ ವಲಯಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಇನ್ನು ಮುಂದೆ ನೀರಿನ ಕೊರತೆಯಾಗುವುದಿಲ್ಲ’.ನಗರದಲ್ಲಿ ಇನ್ನೂ ೧೫ ವಲಯಗಳಿದ್ದು, ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. ಹೊಸಪೇಟೆ, ಕೊಪ್ಪಳದಲ್ಲೂ ಯೋಜನೆಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದರು.
ತುಂಗಭದ್ರಾ ಜಲಾಶಯದಿಂದ ಬಳ್ಳಾರಿಗೆ ನೀರು
Please follow and like us: