ತುಮಕೂರು: ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಮದ್ಯ ಸೇವಿಸಿ ತೂರಾಡುತ್ತಲೇ ಶಾಲೆಗೆ ಬಂದ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.ಕಾಂತರಾಜ್ ಅಮಾನತುಗೊಂಡಿರುವ ಶಿಕ್ಷಕ. ಈತ ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದಾನೆ. ಮದ್ಯಸೇವಿಸಿ ಶಾಲೆಗೆ ಬಂದಿರುವ ವಿಚಾರ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ ಶಾಲೆಯ ಬಳಿ ಜಮಾಯಿಸಿದ ಪೋಷಕರು, ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಕುಣಿಗಲ್ ಬಿಇಒ ತಿಮ್ಮರಾಜು ಅವರ ಗಮನಕ್ಕೆ ತಂದಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಬಿಇಒ, ಶಿಕ್ಷಕ ಕಾಂತರಾಜು ಅವರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮದ್ಯ ಸೇವಿಸಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada