ದಕ್ಷಿಣ ಕನ್ನಡ ಜಿಲ್ಲೆ ಬಹುತೇಕ ಸ್ತಬ್ಧ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ನನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದ್ದು, ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಮಂಗಳೂರು ನಗರ ಪ್ರವೇಶಿಸಲು ನಿರ್ಬಂಧ ವಿಧಿಸಲಾಗಿದ್ದು, ನಗರದ ಹಲವೆಡೆ ನಾಕಾಬಂಧಿ ಮಾಡಿ ಬಂದೋಬಸ್ತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಜಿಲ್ಲೆಯಲ್ಲಿ  ಒಟ್ಟು ಸೋಂಕಿತರ ಸಂಖ್ಯೆ 3,306ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ  2,183 ಸಕ್ರಿಯ ಪ್ರಕರಣಗಳಿವೆ.

 

Please follow and like us:

Leave a Reply

Your email address will not be published. Required fields are marked *

Next Post

ಪ್ಯಾನ್ ಇಂಡಿಯಾ ಚಿತ್ರದಲ್ಲಿ ಪ್ರಭಾಸ್-ದೀಪಿಕಾ ಪಡುಕೋಣೆ

Sun Jul 19 , 2020
‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಮತ್ತು ‘ಪದ್ಮಾವತ್’ ಖ್ಯಾತಿಯ ನಟಿ ದೀಪಿಕಾ ಪಡುಕೋಣೆ ಒಂದೇ ಚಿತ್ರದಲ್ಲಿ ನಟಿಸುವ ಕುರಿತಾಗಿ ವೈಜಯಂತಿ ಮೂವೀಸ್ ಅಧಿಕೃತ ಘೋಷಣೆ ಮಾಡಿದೆ. ತೆಲುಗು ಚಿತ್ರದ ಖ್ಯಾತ ನಿರ್ಮಾಣ ಸಂಸ್ಥೆಯಾಗಿರುವ ವೈಜಯಂತಿ ಮೂವೀಸ್ ನಿರ್ಮಾಣ ಮಾಡಲಿರುವ ‘ಪ್ರಭಾಸ್ 21’ ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿರುವ ಚಿತ್ರವನ್ನು ‘ಮಹಾನಟಿ’ ಖ್ಯಾತಿಯ ನಿರ್ದೇಶಕ ನಾಗನಾಗ್ ಅಶ್ವಿನ್ ನಿರ್ದೇಶಿಸಲಿದ್ದಾರೆ. ವೈಜಯಂತಿ ಮೂವೀಸ್ 50ನೇ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಉಡುಗೊರೆ ಇದಾಗಿದ್ದು ಹೈ ಬಜೆಟ್ […]

Advertisement

Wordpress Social Share Plugin powered by Ultimatelysocial