ಡಾ.ಬಿ.ಆರ್ ಅಂಬೆಡ್ಕರ್ ಅವರ ಭಾವಚಿತ್ರಕ್ಕೆ ಹಾಗು ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾದಿಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಬಸವಕಲ್ಯಾಣ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು..ಪ್ರತಿಭಟನೆ ವೆಳೆ ಮಲ್ಲಿಕಾರ್ಜುನ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನೆ ಮಾಡಿದರು.. ಮಾತನಾಡಿದ ಪ್ರತಿಭಟನಾಕಾರರು ಕೂಡಲೆ ರಾಜ್ಯ ಸರ್ಕಾರ ಮಲ್ಲಿಕಾರ್ಜುನ ಗೌಡ ಅವರನ್ನು ಕೆಲಸದಿಂದ ಅಮಾನತ್ತುಗೊಳಿಸಿ ಬಂಧನ ಮಾಡಬೆಕು.ನ್ಯಾಯ ಸ್ಥಾನದಲ್ಲಿ ನಿಂತು ಕಾನೂನು ಕಾಪಾಡುವವರೆ ಈ ರಿತಿಯ ಕೆಲಸ ಮಾಡುವೂದು ಯಾವ ನ್ಯಾಯ ಎಂದು ಪ್ರಶ್ನಿಸಿ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada