ದಿನದಿಂದ ದಿಕ್ಕೆ ಹೆಚ್ಚುತ್ತಿರುವ ಕೊರೊನಾ

ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಎಲ್ಲೆಡೆ ವಿಸ್ತರಿಸುತ್ತಿದ್ದು ಇದೀಗ ಶಾಸಕರ ಭವನಕ್ಕೂ ಲಗ್ಗೆ ಇಟ್ಟಿದೆ. ಶಾಸಕರ ಭವನದಲ್ಲಿ ಶಾಸಕರ ವಾಹನಗಳನ್ನು ತೊಳೆಯುತ್ತಿದ್ದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಈತ ಸರ್ಕಾರ ನಿಗದಿ ಪಡಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಾಹನಗಳನ್ನು ಸ್ವಚ್ಛಗೊಳಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಆವರಿಸಿರುವುದರಿಂದ ಶಾಸಕರ ಭವನದಲ್ಲಿರುವ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಇದೀಗ ಈತನ ಸಂಪರ್ಕದಲ್ಲಿ ಯಾರಾದರೂ ಇದ್ದಾರೆಯೇ ಎಂಬ ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದೆ. ಈಗ ಸೋಂಕು ಕಾಣಿಸಿಕೊಂಡಿರುವ ಕಾರಣ ಈ ಮಹಾಮಾರಿ ಮತ್ತೆ ಯಾರಿಗೆ ವಕ್ಕರಿಸಿದೆಯೋ ಎಂಬ ಆತಂಕ ಎಲ್ಲರನ್ನು ಕಾಡುತ್ತಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಹಿನ್ನಲೆ

Tue Jun 23 , 2020
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಹಿನ್ನಲೆ, ಡಿಕೆಶಿ ಹೇಳಿಕೆ ನೀಡಿದ್ದಾರೆ.ಜುಲೈ 2 ರಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಕಾರ್ಯಕ್ರಮ ಹೇಗೆ ನಡೆಸಬೇಕೆಂದು ಪಕ್ಷದ ಮುಖಂಡರ ಜತೆ ಚರ್ಚೆ ನಡೆಸಿದ್ದೇನೆ,ಪಕ್ಷದ ಕೆಲವರಿಗೆ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 150 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ, ಸರ್ಕಾರ ಏನ್ […]

Advertisement

Wordpress Social Share Plugin powered by Ultimatelysocial