ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಎಲ್ಲೆಡೆ ವಿಸ್ತರಿಸುತ್ತಿದ್ದು ಇದೀಗ ಶಾಸಕರ ಭವನಕ್ಕೂ ಲಗ್ಗೆ ಇಟ್ಟಿದೆ. ಶಾಸಕರ ಭವನದಲ್ಲಿ ಶಾಸಕರ ವಾಹನಗಳನ್ನು ತೊಳೆಯುತ್ತಿದ್ದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಈತ ಸರ್ಕಾರ ನಿಗದಿ ಪಡಿಸಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಾಹನಗಳನ್ನು ಸ್ವಚ್ಛಗೊಳಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಆವರಿಸಿರುವುದರಿಂದ ಶಾಸಕರ ಭವನದಲ್ಲಿರುವ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಇದೀಗ ಈತನ ಸಂಪರ್ಕದಲ್ಲಿ ಯಾರಾದರೂ ಇದ್ದಾರೆಯೇ ಎಂಬ ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದೆ. ಈಗ ಸೋಂಕು ಕಾಣಿಸಿಕೊಂಡಿರುವ ಕಾರಣ ಈ ಮಹಾಮಾರಿ ಮತ್ತೆ ಯಾರಿಗೆ ವಕ್ಕರಿಸಿದೆಯೋ ಎಂಬ ಆತಂಕ ಎಲ್ಲರನ್ನು ಕಾಡುತ್ತಿದೆ.