ಸೂಕ್ತ ಚಿಕಿತ್ಸೆ ದೊರೆಯದೆ ಮತ್ತಿಬ್ಬರು ಅಮಾನವೀಯವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯ ೪೫ ವರ್ಷದ ಮಹಿಳೆ ಹಾಗೂ ಕಾಚರಕನಹಳ್ಳಿಯ ವೃದ್ಧರೊಬ್ಬರು ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟ ದುರ್ದೈವಿಗಳು. ೪೫ ವರ್ಷದ ಮಹಿಳೆ ಕಳೆದ ಬುಧವಾರ ಮನೆಗೆ ಹೋಗುತ್ತಿದ್ದಾಗ ತಲೆ ತಿರುಗಿ ಕುಸಿದು ಬಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಂವಿಜೆ, ಮಣಿಪಾಲ್ ಮತ್ತು ವೈದೇಹಿ ಆಸ್ಪತ್ರೆಗೆ ಸುತ್ತಾಡಿ ಕೊನೆಗೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಚಿಕಿತ್ಸೆ ನೀಡಿದ ವೈದ್ಯರು ಮೆದುಳಿಗೆ ತೀವ್ರ ಪೆಟ್ಟಾಗಿರುವುದರಿಂದ ಬೇರೆ ಐಸಿಯು ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದರು. ಕುಟುಂಬಸ್ಥರು ಐಸಿಯು ಚಿಕಿತ್ಸೆಗಾಗಿ ನಗರದ ಹಲವಾರು ಆಸ್ಪತ್ರೆಗಳಿಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೆಲವು ಕಡೆ ಬೆಡ್ ಖಾಲಿ ಇಲ್ಲ ಎಂದರೆ, ಮತ್ತೆ ಕೆಲವರು ಕೋವಿಡ್ ರಿಪೋರ್ಟ್ ಬಂದರೆ ಮಾತ್ರ ಚಿಕಿತ್ಸೆ ನೀಡುವುದಾಗಿ ಜಾರಿಕೊಂಡರು. ಹೀಗಾಗಿ ಕಳೆದ ಎರಡು ದಿನಗಳಿಂದ ಸೂಕ್ತ ಚಿಕಿತ್ಸೆ ದೊರೆಯದೆ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಹಿಳೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಮಹಿಳೆಯ ಸಾವಿಗೆ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ದಿನೇ ದಿನೇ ಕೊರೋನಾ ರುದ್ರನರ್ತನ ಹೆಚ್ಚಾಗ್ತಾಯಿದೆ
Please follow and like us: