ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ನಿಧಿಯಿಂದ, ಕೊಲ್ಲೂರು ಗ್ರಾಮದಿಂದ ಜೋನೇಕೇರಿ ಗ್ರಾಮದವರಿಗೆ ಡಾಂಬರ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡಿದ ಕಾರಣ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಮಳೆಯಾದರೆ ಮನೆಗಳಿಗೆ ನೀರು ನುಗ್ಗುತ್ತಿವೆ.ಯಾವುದೇ ಒಂದು ರಸ್ತೆ ನಿರ್ಮಾಣ ಮಾಡಬೇಕಾದರೆ ಅದರ ಪಕ್ಕದಲ್ಲಿ ಚರಂಡಿ ವ್ಯವಸ್ಥೆ ಮಾಡಲೇಬೇಕಾಗುತ್ತದೆ.ಸರ್ಕಾರ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಮುಖಾಂತರ ಈ ಭಾಗದ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದ್ದರು ಅಧಿಕಾರಿಗಳು ಸರಿಯಾಗಿ ಅದನ್ನು ಬಳಸಿಕೊಳ್ಳದೆ ಈ ರೀತಿ ಅವಾಂತರ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ
Please follow and like us: