ದೇಶದಲ್ಲಿ ಕೊರೊನಾ ಆರ್ಭಟ ಹೊಸದಾಗಿ ೩೭,೭೨೪ ಮಂದಿಗೆ ವಕ್ಕರಿಸಿದೆ ಸೋಂಕು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ ಹೊಸದಾಗಿ 37,724 ಮಂದಿಗೆ ಮಹಾಮಾರಿ ಸೋಂಕು ವಕ್ಕರಿಸಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,92,915ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 648 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಮಹಾಮಾರಿ ವೈರಸ್ ಗೆ ದೇಶದಲ್ಲಿ 28,732 ಮಂದಿ ಸಾವನ್ನಪ್ಪಿದ್ದಾರೆ. 11,92,915 ಮಂದಿ ಸೋಂಕಿತರ ಪೈಕಿ 7,53,050 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 41,11,33 ಮಂದಿ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಎರಡು ಹುಲಿ ಸೇರಿ ಎಂಟು ಪ್ರಾಣಿ ದತ್ತು

Wed Jul 22 , 2020
ತಾಲ್ಲೂಕಿನ ಬಿಳಿಕಲ್‌ ಸಂರಕ್ಷಿತ ಅರಣ್ಯದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಎಂಟು ಪ್ರಾಣಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಉದ್ಯಾನದಲ್ಲಿ ನಡೆಯಿತು. ಸಂಡೂರಿನ ವೀರಭದ್ರಪ್ಪ ಸಂಗಪ್ಪ ಗಣಿ ಕಂಪನಿಯು ವಾಯುಪುತ್ರ ಹೆಸರಿನ ಹುಲಿ, ಕುಮಾರಸ್ವಾಮಿ ಮಿನರಲ್ಸ್‌ ಎಕ್ಸ್‌ಪೋರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ನಿಂದ ಕೆಸರಿ ಹೆಸರಿನ ಸಿಂಹ ಹಾಗೂ ಪಿ. ಬಾಲಸುಬ್ಬ ಶೆಟ್ಟಿ ಅಂಡ್‌ ಸನ್‌ ಕಂಪನಿಯು ಚಾಮುಂಡಿ ಹೆಸರಿನ ಹುಲಿಯನ್ನು ದತ್ತು ತೆಗೆದುಕೊಂಡಿದೆ. ಮೂರೂ ಕಂಪನಿಗಳು ತಲಾ ₹1 ಲಕ್ಷ ಪಾವತಿಸಿವೆ. […]

Advertisement

Wordpress Social Share Plugin powered by Ultimatelysocial