ಮಾರಕ ಕ್ಯಾನ್ಸರ್ ಕಾಯಿಲೆಗೆ ಔಷಧಿ ನೀಡಿ ಹೆಸರುವಾಸಿಯಾಗಿದ್ದ ನಾಟಿವೈದ್ಯ ನರಸಿಪುರ ನಾರಾಯಣಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಆನಂದಪುರ ಸಮೀಪ ನರಸಿಪುರದಲ್ಲಿ ವಾಸವಿದ್ದ ನಾರಾಯಣಮೂರ್ತಿಯವರಿಗೆ 81 ವರ್ಷ ವಯಸ್ಸಾಗಿತ್ತು. ಹಾಗೂ ಹಲವಾರು ವರ್ಷಗಳಿಂದ ಕ್ಯಾನ್ಸರ್, ಮಧುಮೇಹ, ಮೂಳೆ ಸಮಸ್ಯೆ ಸೇರಿದಂತೆ ಅನೇಕ ಬಗೆಯ ರೋಗಗಳಿಗೆ ನಾಟಿ ಔಷಧಿ ನೀಡಿ ದೇಶ ವಿದೇಶಗಳಲ್ಲಿ ಹೆಸರಾಗಿದ್ದ ನಾರಾಯಣ ಮೂರ್ತಿ ನಿಧನರಾಗಿದ್ದು ಮೃತರಿಗೆ ಪತ್ನಿ, ನಾಲ್ವರು ಹೆಣ್ಣುಮಕ್ಕಳು ಹಾಗೂ ಓರ್ವ ಪುತ್ರರಿದ್ದಾರೆ. ಇವರ ಬಳಿ ಕ್ಯಾನ್ಸರ್ ಔಷಧಿಗಾಗಿ ಭಾರತದ ಹಲವು ರಾಜ್ಯಗಳಲ್ಲದೆ ಆಸ್ಟ್ರೇಲಿಯಾ, ಶ್ರೀಲಂಕಾಗಳಿಂದ ಜನ ಆಗಮಿಸುತ್ತಿದ್ದರು. ಆದ್ದರಿಂದ ಅವರ ನಿಧನದ ನಂತರ ಅವರ ಪುತ್ರ ಈ ನಾಟಿಔಷಧಿ ನೀಡುವ ಪಾರಂಪರಿಕ ವೃತ್ತಿ ಮುಂದುವರಿಸಲಿದ್ದಾರೆ ಎನ್ನಲಾಗಿದೆ.