ನಾಟಿ ಔಷಧಿ ನಾರಾಯಣಮೂರ್ತಿ ಇನ್ನಿಲ್ಲ

ಮಾರಕ  ಕ್ಯಾನ್ಸರ್ ಕಾಯಿಲೆಗೆ ಔಷಧಿ ನೀಡಿ ಹೆಸರುವಾಸಿಯಾಗಿದ್ದ ನಾಟಿವೈದ್ಯ ನರಸಿಪುರ ನಾರಾಯಣಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲ್ಲೂಕು ಆನಂದಪುರ ಸಮೀಪ ನರಸಿಪುರದಲ್ಲಿ ವಾಸವಿದ್ದ ನಾರಾಯಣಮೂರ್ತಿಯವರಿಗೆ 81 ವರ್ಷ ವಯಸ್ಸಾಗಿತ್ತು. ಹಾಗೂ ಹಲವಾರು ವರ್ಷಗಳಿಂದ ಕ್ಯಾನ್ಸರ್, ಮಧುಮೇಹ, ಮೂಳೆ ಸಮಸ್ಯೆ ಸೇರಿದಂತೆ ಅನೇಕ ಬಗೆಯ ರೋಗಗಳಿಗೆ ನಾಟಿ ಔಷಧಿ ನೀಡಿ ದೇಶ ವಿದೇಶಗಳಲ್ಲಿ ಹೆಸರಾಗಿದ್ದ ನಾರಾಯಣ ಮೂರ್ತಿ ನಿಧನರಾಗಿದ್ದು ಮೃತರಿಗೆ ಪತ್ನಿ, ನಾಲ್ವರು ಹೆಣ್ಣುಮಕ್ಕಳು ಹಾಗೂ ಓರ್ವ ಪುತ್ರರಿದ್ದಾರೆ. ಇವರ ಬಳಿ ಕ್ಯಾನ್ಸರ್ ಔಷಧಿಗಾಗಿ ಭಾರತದ ಹಲವು ರಾಜ್ಯಗಳಲ್ಲದೆ ಆಸ್ಟ್ರೇಲಿಯಾ, ಶ್ರೀಲಂಕಾಗಳಿಂದ ಜನ ಆಗಮಿಸುತ್ತಿದ್ದರು. ಆದ್ದರಿಂದ ಅವರ ನಿಧನದ ನಂತರ ಅವರ ಪುತ್ರ ಈ ನಾಟಿಔಷಧಿ ನೀಡುವ ಪಾರಂಪರಿಕ ವೃತ್ತಿ  ಮುಂದುವರಿಸಲಿದ್ದಾರೆ ಎನ್ನಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ನಕಲಿ ಔಷಧಿಗಳ ಮಾರಾಟಕ್ಕೆ ಅವಕಾಶವಿಲ್ಲ

Thu Jun 25 , 2020
ಮಹಾರಾಷ್ಟ್ರವು ನಕಲಿ ಔಷಧಿಗಳ ಮಾರಾಟವನ್ನು ಅನುಮತಿಸುವುದಿಲ್ಲ ಎಂದು ರಾಮ್‌ದೇವ್‌ಗೆ ಎಚ್ಚರಿಕೆ ನೀಡುತ್ತೇನೆ, ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಟ್ವಿಟರ್‌ನಲ್ಲಿ ಬರೆದಿದ್ದರು. ರಾಮದೇವ್ ಅವರ ಪತಂಜಲಿ ಆಯುರ್ವೇದವು ಕರೋನವೈರಸ್ ಸೋಂಕಿಗೆ ಔಷಧ ಕಂಡು ಹಿಡಿದಿದ್ದು. ಇದೀಗ ಎಲ್ಲೆಡೆ ವಿವಾದಕ್ಕೆ ಸೃಷ್ಟಿಯಾಗಿದೆ. ಈ ಮಧ್ಯೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಯೋಗ ಗುರುಗಳಿಗೆ ಎಚ್ಚರಿಕೆ ನೀಡಿದ್ದು, ರಾಜ್ಯವು ನಕಲಿ ಔಷಧಿಗಳ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial