ರಾಜಸ್ಥಾನದ ಉಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವ ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಸುದ್ದಿಗೋಷ್ಠಿ ನಡೆಸಿ, ನಾನು ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂದಿನ ನಡೆ ಏನು ಎಂಬುದರ ಸುಳಿವು ನೀಡಿಲ್ಲ. ಬಿಜೆಪಿ ವಿರುದ್ಧ ಪ್ರಚಾರ ನಡೆಸಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಪೈಲಟ್ ನೆರವಾಗಿದ್ದರು. ಆದರೆ, ಸಿಎಂ ಆಗಿ ಅಶೋಕ್ ಗೆಹ್ಲೋಟ್ ಅವರನ್ನು ನೇಮಿಸದ ನಂತರ ಸಚಿನ್ ಪೈಲೆಟ್ ಅಸಾಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿದ ಅಶೋಕ್ ಗೆಹ್ಲೋಟ್ ಅವರು ಡಿಸಿಎಂ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ತೆಗೆದು ಹಾಕಲಾಗಿದೆ. ಸಚಿವರಾದ ವಿಶ್ವೇಂದರ್ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನು ಸಚಿವ ಸ್ಥಾನ ಕೆಳಗಿಳಿಸಲಾಗಿದೆ ಎಂದು ಅಧಿಕೃತವಾಗಿ ರಾಜ್ಯಪಾಲರಿಗೆ ತಿಳಿಸಿದ್ದರು
”ನಾನು ಬಿಜೆಪಿ ಸೇರಲ್ಲ” ಎಂದ ಸಚಿನ್ ಪೈಲೆಟ್!!
Please follow and like us: