”ನಾನು ಬಿಜೆಪಿ ಸೇರಲ್ಲ” ಎಂದ ಸಚಿನ್ ಪೈಲೆಟ್!!

ರಾಜಸ್ಥಾನದ ಉಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವ ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಸುದ್ದಿಗೋಷ್ಠಿ ನಡೆಸಿ, ನಾನು ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂದಿನ ನಡೆ ಏನು ಎಂಬುದರ ಸುಳಿವು ನೀಡಿಲ್ಲ. ಬಿಜೆಪಿ ವಿರುದ್ಧ ಪ್ರಚಾರ ನಡೆಸಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಪೈಲಟ್ ನೆರವಾಗಿದ್ದರು. ಆದರೆ, ಸಿಎಂ ಆಗಿ ಅಶೋಕ್ ಗೆಹ್ಲೋಟ್ ಅವರನ್ನು ನೇಮಿಸದ ನಂತರ ಸಚಿನ್ ಪೈಲೆಟ್ ಅಸಾಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿದ ಅಶೋಕ್ ಗೆಹ್ಲೋಟ್ ಅವರು ಡಿಸಿಎಂ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ತೆಗೆದು ಹಾಕಲಾಗಿದೆ. ಸಚಿವರಾದ ವಿಶ್ವೇಂದರ್ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನು ಸಚಿವ ಸ್ಥಾನ ಕೆಳಗಿಳಿಸಲಾಗಿದೆ ಎಂದು ಅಧಿಕೃತವಾಗಿ ರಾಜ್ಯಪಾಲರಿಗೆ ತಿಳಿಸಿದ್ದರು

Please follow and like us:

Leave a Reply

Your email address will not be published. Required fields are marked *

Next Post

ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಸುರೇಶ್ ಕುಮಾರ್ ಕಾರಣ

Wed Jul 15 , 2020
ದ್ವಿತೀಯ ಪಿಯುಸಿ ಫಲಿತಾಂಶ ಕುಸಿತಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೆ ಹೊಣೆಗಾರರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಕಾರಣ ಏನು ಎಂಬುವುದನ್ನು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು ಈ ವರ್ಷ ೬,೭೫,೨೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ ೩,೮೪,೯೩೭ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಖಡಾವಾರು ಫಲಿತಾಂಶ ಶೇ. ೬೧.೮೦ ರಷ್ಟು ಬಂದಿದೆ. ದ್ವಿತೀಯ ಪಿಯುಸಿ […]

Advertisement

Wordpress Social Share Plugin powered by Ultimatelysocial