ನಾಲ್ವರಿಂದ ನೈಜಿರಿಯಾ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಬಗ್ಗೆ ಯುವತಿ ಆರೋಪ ಮಾಡಿದ್ದಾರೆ 25 ವರ್ಷದ ನೈಜೀರಿಯಾ ಯುವತಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಆಟೋ ಚಾಲಕ ಶಿವಶಂಕರ್, ಶ್ರೀಧರ್, ಗೋಪಿ ಮತ್ತು ಹರೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಎರಡು ತಿಂಗಳ ಹಿಂದೆ ಶಿವಶಂಕರ್ ಪರಿಚಯವಾಗಿದ್ದಾನೆ. ಮೇ 10 ರಂದು ಕರೆ ಮಾಡಿ ಯುವತಿಯನ್ನು ಕರೆಸಿಕೊಂಡಿದ್ದ ಶಿವಶಂಕರ್ ಆಟೋದಲ್ಲಿ ಕರೆದುಕೊಂಡು ಹೊರಟಿದ್ದು, ಇದೇ ವೇಳೆ ಉಳಿದ ಮೂವರನ್ನು ಆಟೋ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಯುವತಿ ದೂರು ನೀಡಿದ್ದು ಈಗ ಬೆಳಕಿಗೆ ಬಂದಿದೆ.ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ ಆರೋಪಿಗಳನ್ನು ವಿಚಾರಣೆ ಮಾಡುವಾಗ ಹಣಕಾಸಿನ ವಿಚಾರಕ್ಕೆ ಯುವತಿ ಈ ರೀತಿ ಸುಳ್ಳು ಆರೋಪ ಮಾಡಿದ್ದಾಳೆ ಎಂದು ಹೇಳಿದ್ದಾರೆ ಪೊಲೀಸರು ತನಿಖೆ ಮುಂದುವರಿಸಿದ್ದು. ತಲಘಟ್ಟಪುರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ