ನಿವೃತ್ತ ಶಿಕ್ಷಕನಿಂದ ತಹಶೀಲ್ದಾರ್ ಮೇಲೆ ಹಲ್ಲೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ  ಜಮೀನು ಸರ್ವೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಮತ್ತು ತಹಶೀಲ್ದಾರರಾದ ಚಂದ್ರಮೌಳೇಶ್ವರ ನಡುವೆ ಮಾತಿಗೆ ಚಕಮಕಿ ನಡೆದು ದುರ್ಷ್ಕಮಿ ತಹಶೀಲ್ದಾರರಿಗೆ ಚಾಕುವಿನಿಂದ ಇರಿದಿದ್ದನು. ತ್ರೀವ ಗಂಭೀರ ಸ್ಥಿತಿಯಲ್ಲಿದ್ದ ತಹಶಿಲ್ದಾರರನ್ನು ಹೆಚ್ಚಿನ ಚಿಕೆತ್ಸೆಗಾಗಿ ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಈ ಘಟನೆಯನ್ನು ಸ್ಥಳೀಯ ಶಾಸಕ ಎಸ್. ಎನ್.ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು, ದೇವರು ಅವರ ಕುಟುಂಬಕ್ಕೆ ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲಿ ಎಂದರು. ನಂತರ ಶಾಸಕರ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರರೆಡ್ಡಿ   ಕರ್ನಾಟಕ  ನೌಕರರ ಸಂಘ, ಪದಾಧಿಕಾರಿಗಳು  ಮುಂತಾದವರು ತಹಶೀಲ್ದಾರರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ಬಿಹಾರದಲ್ಲಿ ಎನ್‌ಕೌಂಟರ್ -ನಾಲ್ವರು ನಕ್ಸಲರ ಹತ್ಯೆ

Fri Jul 10 , 2020
ಬಿಹಾರದ ಪಶ್ಚಿಮದ ಚಂಪಾರಣ್ ಜಿಲ್ಲೆಯಲ್ಲಿ ಪೋಲಿಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು, ೩ ಸೆಲ್ಫ್ ಲೋಡಿಂಗ್ ರೈಫಲ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಗಹ ಎಂಬ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ್ದ ಸಶಸ್ತ್ರ ಸೀಮಾ ಬಲ ಹಾಗೂ ವಿಶೇಷ ಕಾರ್ಯಾಚರಣಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. […]

Advertisement

Wordpress Social Share Plugin powered by Ultimatelysocial