ನೆರೆ ಕಾಣಿಸಿಕೊಳ್ಳುವ ಮೊದಲೆ ಅಗತ್ಯ ವಸ್ತುಗಳ ಪೂರೈಕೆಗೆ ಸೂಚನೆ

ಬೆಂಗಳೂರು: ನೆರೆ ಕಾಣಿಸಿಕೊಂಡ ನಂತರ ಪರಿಹಾರ ಘೋಷಣೆಗಿಂತ ನೆರೆ ಕಾಣಿಸಿಕೊಳ್ಳುವ ಮೊದಲೇ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯ ವಿಪತ್ತು ನಿಗ್ರಹ ನಿಧಿಯಡಿ 201 ಕೋಟಿ ರೂ.ನೀಡಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ವೈರಸ್ ತಡೆ ಕಾರ್ಯಕ್ಕೆ ಈವರೆಗೆ 271 ಕೋಟಿ ರೂ.ಬಿಡುಗಡೆ ಮಾಡಲಾಗಿದ್ದು, ಅದರ ಬಳಕೆ ವಿವರ ನೀಡುವಂತೆ ಆರೋಗ್ಯ, ಪೊಲೀಸ್ ಇಲಾಖೆ ಜತೆಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ವಲಸೆ ಕಾರ್ಮಿಕರಿಗೆ  ಸಿಹಿ ಸುದ್ದಿ

Fri May 22 , 2020
ಬೆಂಗಳೂರು: ಲಾಕ್‌ಡೌನ್‌ನಿಂದ ದೇಶದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಕೈಯಲ್ಲಿ ದುಡ್ಡಿಲ್ಲದೆ ಅನೇಕ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ. . ಇಂತಹ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಂತಸದ ಸುದ್ದಿ ನೀಡಿದೆ.  ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿಯ […]

Advertisement

Wordpress Social Share Plugin powered by Ultimatelysocial