ನೆಹರು ಹೆಸರು ಕೈಬಿಟ್ಟ ಉತ್ತರ ಪ್ರದೇಶ ಸರ್ಕಾರ

ದಿವಂಗತ ಮಾಜಿ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತಿ ಯವರ ಇತಿಹಾಸಕ್ಕೆ ಸಂಬoಧಿಸಿದ ಭಾಗಗಳನ್ನು ಉತ್ತರಪ್ರದೇಶ ಶಿಕ್ಷಣ ಇಲಾಖೆ ೧೨ನೇ ತರಗತಿ ಪಠ್ಯಕ್ರಮದಿಂದ ಕೈಬಿಟ್ಟಿದೆ. ರಾಜ್ಯ ಕಾಂಗ್ರೆಸ್ ಘಟಕ ಉತ್ತರಪ್ರದೇಶ ಬಿಜೆಪಿ ಸರ್ಕಾರದ ಈ ಕ್ರಮವನ್ನು ವಿರೋಧಿಸಿದ್ದು ರಾಜ್ಯಾದ್ಯಂತ ಆಂದೋಲನಕ್ಕೆ ಕರೆ ನೀಡುವುದಾಗಿ ಬೆದರಿಕೆ ಒಡ್ಡಿದೆ. ಬಿಜೆಪಿ ಪಕ್ಷದ ಈ ನಡೆಯನ್ನು ಪಿತೂರಿ ಎಂದು ಕರೆದಿರುವ ಲಾಲ್ ಬಹದ್ದೂರ್ ಶಾಸ್ತಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, ಪಠ್ಯಕ್ರಮದಿಂದ ಕೈಬಿಟ್ಟ ಇತಿಹಾಸದ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರಾಮಮಂದಿರ ಭೂಮಿ ಪೂಜೆ

Tue Jul 28 , 2020
ಆಗಸ್ಟ್ ೫ ರಂದು ನಡೆಯಲಿರುವ ರಾಮ ಜನ್ಮ ಭೂಮಿಯ ಪೂಜೆಯ ಕಾರ್ಯಕ್ಕೆ ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮಿಜಿಯವರಿಗೆ ಆಹ್ವಾನವನ್ನ ನೀಡಲಾಗಿದೆ ಇದಕ್ಕೆ ಸ್ವಾಮಿಜಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಂಬರುವ ಆಗಸ್ಟ್ ೫ರಂದು ನಡೆಯಲಿರುವ ರಾಮಮಂದಿರದ ಭೂಮಿಪೂಜೆಗೆ ಆಗಮಿಸುವಂತೆ ವಿಶ್ವ ಹಿಂದೂ ಪರಿಷತ್‍ನ ವಿವಿಧ ಮುಖಂಡರು ಹಾಗೂ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪದಾಧಿಕಾರಿಗಳು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳು ಅಯೋಧ್ಯೆ ರಾಮಮಂದಿರದ ಭೂಮಿಪೂಜೆಗೆ ಆಗಮಿಸಬೇಕೆಂದು […]

Advertisement

Wordpress Social Share Plugin powered by Ultimatelysocial