ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ

ಬಿಎಸ್‌ವೈ ಅವರ ಜೊತೆ ನಾನು ಸಾಕಷ್ಟು ಮಾತುಕತೆ ನಡೆಸಿದ್ದೇನೆ. ಸಿಎಂ ಜೊತೆ ವಿಶ್ವನಾಥ್ ಅವರು ಮಾತಾಡಿ ಆರಾಮವಾಗಿ ಹೋಗಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಗೆದ್ದವರಿಗೆಲ್ಲ ಯಡಿಯೂರಪ್ಪನವರು ಸಚಿವ ಸ್ಥಾನ ಕೊಟ್ಟಿದ್ದಾರೆ. ಇದೀಗ ಸೋತವರು ಕೂಡ ಸಚಿವ ಸ್ಥಾನ ಕೇಳುತ್ತಿದ್ದಾರೆ. ಪಕ್ಷ ಸೇರುವಾಗ ಏನು ಮಾತು ಕೊಟ್ಟಿದ್ದಾರೋ ಅದು ಅವರಿಗೆ ಗೊತ್ತಿದೆ. ಅದನ್ನು ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸದ್ಯ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಸುಭದ್ರ ಸರ್ಕಾರ ಇದೆ. ಮೂರು ವರ್ಷ ಯಡಿಯೂರಪ್ಪ ಅವರು ಅಧಿಕಾರಿ ಕಂಪ್ಲೀಟ್ ಮಾಡುತ್ತಾರೆ. ಎಲ್ಲರೂ ರಾಷ್ಟ್ರೀಯ ಪಕ್ಷದಲ್ಲಿ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧರಾಗಿದ್ದಾರೆ. ಹಾಗಾಗಿ ಇದೆಲ್ಲವು ಹೈಕಮಾಂಡ್ ತೀರ್ಮಾನ ಮಾಡಲಿದೆ. ಇನ್ನು ದೇವೇಗೌಡರ ಬಗ್ಗೆ ನನ್ನ ಬಳಿ ಮಾತಾಡಬೇಡಿ. ಅವರ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನಾನು ಅವರ ಹೆಸರನ್ನು ಎತ್ತೋದಿಲ್ಲ. ಅವರ ಹೆಸರು ಹೇಳಿ ಕಾಂಟ್ರವರ್ಸಿ ಆಗೋದು ಬೇಡ ಎಂದು ಗರಂ ಆದರು.

Please follow and like us:

Leave a Reply

Your email address will not be published. Required fields are marked *

Next Post

ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ

Mon Jun 15 , 2020
ನೆಟ್ ವರ್ಕ್ ಹಾಗೂ ಸಂಪರ್ಕದ ಸಮಸ್ಯೆಗಳ ಬಗ್ಗೆ ವಾರದಲ್ಲಿ ಜಿಲ್ಲಾಧಿಕಾರಿ ಮತ್ತು ಶಾಸಕರ ಜೊತೆ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಟ್ ವರ್ಕ್ ಸಮಸ್ಯೆಯಿಂದ ಪಡಿತರ ಸೇರಿದಂತೆ ಸರ್ಕಾರದ ಆಡಳಿತಾತ್ಮಕ ಹಾಗೂ ಜನಜೀವನಕ್ಕೆ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. ಸಮಗ್ರ ಸುಳ್ಯ ತಾಲ್ಲೂಕಿನಲ್ಲಿನ ಸಂಪರ್ಕ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ ಎಂದು ಹೇಳಿದರು. […]

Advertisement

Wordpress Social Share Plugin powered by Ultimatelysocial