ಬೆಂಗಳೂರು: ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಸೂರಜ್ ರೇವಣ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಸೂರಜ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣವಚನ ಬೋಧಿಸಿದರು. ಶಾಸಕರೂ ಆಗಿರುವ ಸೂರಜ್ ಅವರ ತಂದೆ ಎಚ್.ಡಿ. ರೇವಣ್ಣ, ತಾಯಿ ಭವಾನಿ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಉಪಸ್ಥಿತರಿದ್ದರು.ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ಸದಸ್ಯರ ಪ್ರಮಾಣವಚನ ಸಮಾರಂಭ ಜನವರಿ 6ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದಿತ್ತು. ಆದರೆ, ಆ ದಿನ ಒಳ್ಳೆಯ ಮುಹೂರ್ತವಿಲ್ಲ ಎಂಬ ಕಾರಣದಿಂದ ಸೂರಜ್ ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada