ಪಿಎಸ್ಐ ಪರೀಕ್ಷೆ ರದ್ದು ಸ್ವಾಗತಾರ್ಹ:ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಮೋಸ್ಟ್ ಕರೆಪ್ಟಿವ್ ಸರ್ಕಾರ. ಸರ್ಕಾರದ ಗಮನಕ್ಕೆ ಬಾರದೆ ಭ್ರಷ್ಟಾಚಾರ ನಡೆಯಲು ಸಾಧ್ಯನಾ..? ನನ್ನ ಪ್ರಕಾರ ಗೃಹ ಸಚಿವ ಒನ್ ಸೆಕೆಂಡ್‌ ಕೂಡ ಮುಂದುವರೆಯಬಾರದು. ಅರಗ ಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ನೈತಿಕತೆ ಇದ್ರೆ ಸಿಎಂ ಬೊಮ್ಮಾಯಿ ರಾಜೀನಾಮೆ ಪಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದರು.
ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ದಿವ್ಯಾ ಬಂಧನವಾದ ಕೂಡಲೇ ಎಕ್ಸಾಂ ರದ್ದು ವಿಚಾರ, ಬಂಧಿತೆ ದಿವ್ಯಾ ಸತ್ಯ ಹೇಳಲೇಬೇಕಲ್ವಾ. ಬೇರೆ ಯಾರ್ಯಾರು ಇದ್ದಾರೆ, ಯಾರಿಂದ ಲೀಕ್ ಆಯ್ತು ಎಲ್ಲಾ ಗೊತ್ತಾಗಬೇಕಲ್ವ. ಅದಕ್ಕೆ ತನಿಖೆ ಆಗಲೇಬೇಕು ಎಂದರು.
ಪಿಎಸ್‌ಐ ಮರು ಪರೀಕ್ಷೆಗೆ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ ಮಾಜಿ ಸಿಎಂ ಸಿದ‍್ಧರಾಮಯ್ಯ, ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಈಗಿರುವಾಗ ಮರು ಪರೀಕ್ಷೆ ಮಾಡುವುದು ಸರಿ ಇದೆ.ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು. ಬಿಜೆಪಿ ದುರಾಡಳಿತದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಂದು ಕ್ಷಣವೂ ಪದವಿಯಲ್ಲಿ ಮುಂದುವರಿಯಬಾರದು. ಮುಖ್ಯಮಂತ್ರಿ ಇದರ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ- ಸಿ.ಟಿ.ರವಿ ಹೇಳಿಕೆಗೆ ಕಿಡಿ...!

Sat Apr 30 , 2022
ಸಿಟಿ ರವಿ ಹೇಳಿಕೆಗೆ ಮಾಜಿ ಸಿಎಂ ತಿರುಗೇಟು.ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮರಾಗಿದ್ದೀರಿ ಎಂಬ ಶಾಸಕ ಸಿಟಿ ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ಸಂವಿಧಾನ 15 ಭಾಷೆಗಳನ್ನು ಅಧಿಕೃತ ಭಾಷೆಗಳಿಗೆ ಮಾನ್ಯತೆ ನೀಡಿದೆ. ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ.ರವಿಯನ್ನ ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ ? ಪ್ರಜಾಪ್ರಭುತ್ವದಲ್ಲಿ ಯಾರಿಗೆ […]

Advertisement

Wordpress Social Share Plugin powered by Ultimatelysocial