ಪೊಲೀಸ್ ವಾಹನವನ್ನೇ ಕದ್ದ ಕಿಲಾಡಿ ಕಳ್ಳ ಅರೆಸ್ಟ್!

ಧಾರವಾಡ : ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ ಎಂಬುವವರು ಪೊಲೀಸ್ ಠಾಣೆಯ ಕೆಲಸಕ್ಕೆ ಬಳಸುತ್ತಿದ್ದ ಬೊಲೆರೋ ವಾಹನದೊಂದಿಗೆ ಬ್ಯಾಡಗಿವರೆಗೂ ಹೋಗಿದ್ದಾರೆ. ಸಿಬ್ಬಂದಿ ವಾಹನ ಬಳಸಿ ವಾಹನದಲ್ಲೇ‌ ಕೀ ಬಿಟ್ಟಿದ್ದರು.ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ.ನಾಗಪ್ಪ ಹಡಪದ ಎಂಬ ವ್ಯಕ್ತಿ ಪೊಲೀಸ್ ವಾಹನ ಎಗರಿಸಿಕೊಂಡು ಪೊಲೀಸ್ ವಾಹನದಲ್ಲಿ ಬ್ಯಾಡಗಿವರೆಗೂ ಹೋಗಿದ್ದಾರೆ. ಸದ್ಯ ಪೊಲೀಸರು ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ವಾಹನ ಪತ್ತೆ ಹಚ್ಚಿ ಆರೋಪಿಯನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಕ್ಕಳಿಗೆ ಕೊಡಿ ಪೋಷಕಾಂಶಗಳ ಆಗರ ʼಬಾದಾಮಿʼ

Wed Feb 2 , 2022
ಇಂದಿನ ಒತ್ತಡದ ಯುಗದಲ್ಲಿ ಅರೋಗ್ಯದ ಕಡೆಗೆ ಗಮನ ಕೊಡುವುದು ಬಹಳ ಮುಖ್ಯ ಎಂಬುದು ಬಹುತೇಕರಿಗೆ ಮರೆತೇ ಹೋಗಿರುತ್ತದೆ. ಬಾಯಿಗೆ ರುಚಿಯಾಗುವ ವಸ್ತುಗಳನ್ನು ಸೇವಿಸುವ ಬದಲು ಅರೋಗ್ಯಕ್ಕೆ ಯಾವುದು ಉತ್ತಮವೋ ಅದನ್ನು ತಿನ್ನುವುದು ಬಹಳ ಮುಖ್ಯ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇತ್ತೀಚೆಗೆ ಮಕ್ಕಳು ಸೇವಿಸುವ ಆಹಾರದಲ್ಲಿ ದೇಹಕ್ಕೆ ಬೇಕಾಗುವಷ್ಟು ಪ್ರೊಟೀನ್ ಹಾಗೂ ವಿಟಮಿನ್ ಗಳು ಇರುವುದಿಲ್ಲ. ಮಕ್ಕಳ ಬಾಯಿಗೆ ಇಷ್ಟವಾಗುವ ಕುರುಕುಲು ತಿಂಡಿಗಳ ಜೊತೆ ಹಣ್ಣು ತರಕಾರಿ, ಮಾಂಸ, ಮೊಟ್ಟೆ, ಸೊಪ್ಪು ಹಾಗೂ ಒಣಹಣ್ಣುಗಳನ್ನು […]

Advertisement

Wordpress Social Share Plugin powered by Ultimatelysocial