ಪ್ರತಿಯೊಬ್ಬ ಕೂಲಿಕಾರ್ಮಿಕರು ಸಂಘಟಿತರಾಗಬೇಕು

ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಕೂಲಿಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಬೇಕು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ನರಸಣ್ಣ ನಾಯಕ ಸಲಹೆ ನೀಡಿದರು. ರಾಯಚೂರು ಜಿಲ್ಲೆಯ ಜಾಲಹಳ್ಳಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆಯೂ ಗ್ರಾಮದ ಪ್ರದೇಶದ ಜನ ಗೂಳೆ ತಪ್ಪಿಸುವ ಉದ್ದೇಶದಿಂದ ೨೦೦೫ರಲ್ಲಿಯೇ ಕಾಯ್ದೆಯಾಗಿ ರೂಪಿಸಲಾಗಿದೆ. ರೈತರಿಗೆ ಅನುಕೂಲವಾಗುವ ಕೃಷಿ ಹೊಂಡಾ,ಬದು ನಿರ್ಮಾಣ, ಗೋಕುಂಟೆ, ಬಸಿ ಕಾಲುವೇ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಾಮಾನ್ಯ ಸಭೆ ಅಥವಾ ಗ್ರಾಮ ಸಭೆ ಮುಖಾಂತರ ಕೆಲಸಗಳನ್ನು ಆಯ್ಕೆ ಮಾಡಬೇಕು. ಆದರೆ ಅಧಿಕಾರಿಗಳು ಉದ್ಯೋಗ ಖಾತ್ರಿ ಸಮರ್ಪಕವಾಗಿ ಜಾರಿ ಮಾಡುವಲ್ಲಿ ವಿಫಲರಾಗಿದ್ದಾರೆ. ರೈತರು ಸಂಘಟಿತರಾಗಿ ನಿಮ್ಮ ದುಡಿಮೆಯ ಹಕ್ಕು ನೀವು ಪಡೆಯಬೇಕು ಎಂದು ಸಲಹೆ ನೀಡಿದರು. ಈ ಸಂಧರ್ಭದಲ್ಲಿ ರೈತ ಸಂಘದ ವಲಯ ಸಮಿತಿ ಕಾರ್ಯದರ್ಶಿ ಹನುಮಂತ ಮಡಿವಾಳ ಮುಖಂಡರಾದ ಶಬೀರ್ ಜಾಲಹಳ್ಳಿ ಮುಕ್ತ ಪಾಷಾ ಮೌನೇಶ ದಾಸರ್ ದುರುಗಪ್ಪ ವರಟಿ ಹಾಗೂ ಕೂಲಿಕಾರ್ಮಿಕರು ಉಸಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ- ಸತೀಶ್ ಜಾರಕಿಹೊಳಿ

Tue Jul 7 , 2020
ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಉತ್ಸಾಹಿ ರಾಜಕಾರಣಿಯಾಗಿದ್ದಾರೆ. ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದು ಅಪ್ರಸ್ತುತ. ಅವರ ಸಾಮರ್ಥ್ಯ ಹಾಗೂ ಪಕ್ಷ ಸೇವೆ ನೋಡಿ ಹೈಕಮಾಂಡ್ […]

Related posts

Advertisement

Wordpress Social Share Plugin powered by Ultimatelysocial