ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಈಗ ಸುಶಾಂತ್ ಸಹೋದರಿ ಶ್ವೇತಾ ಸಿಂಗ್ ಕರ್ತಿ ಪ್ರಧಾನಿಯವರಿಗೆ ಪತ್ರ ಬರೆದು, ‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ, ನಮಗೆ ನ್ಯಾಯಕೊಡಿಸಿ’ ಎಂದು ಮನವಿ ಮಾಡಿದ್ದಾರೆ. ಶ್ವೇತಾ ಅವರು ಪ್ರಧಾನಿಯವರಿಗೆ ಬರೆದಿರುವ ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣವೊಂದರ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಪತ್ರದಲ್ಲಿ, ‘ನಾವೊಂದು ಸಾಧಾರಣ ಕುಟುಂಬದ ಹಿನ್ನೆಲೆಯುಳ್ಳವರು. ನನ್ನ ಸಹೋದರ ಬಾಲಿವುಡ್ ಪ್ರವೇಶಿಸಿದಾಗ ಅವನಿಗೆ ಯಾವ ಗಾಡ್ಫಾದರ್ ಇರಲಿಲ್ಲ. ಈಗಲೂ ಇಲ್ಲ. ನನ್ನ ಮನವಿ ಇಷ್ಟೇ ತಕ್ಷಣ ಈ ಪ್ರಕರಣವನ್ನು ಕೂಲಂಕಶವಾಗಿ ಪರಿಶೀಲಿಸಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷಿ ನಾಶಕ್ಕೆ ಅವಕಾಶ ಕೊಡಬೇಡಿ. ಸತ್ಯಕ್ಕೆ ಗೆಲುವು ಸಿಗಲಿ. ನಮ್ಮ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಿ. ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ’ ಎಂದು ವಿವರಿಸಿದ್ದಾರೆ.
ಪ್ರಧಾನಿಗೆ ಸುಶಾಂತ್ ಸಹೋದರಿ ಮನವಿ
Please follow and like us: