ಪ್ರಧಾನಿ:ಬಜೆಟ್ ಅಧಿವೇಶನ ಫಲಪ್ರದವಾಗಿಸಬೇಕು;ಚುನಾವಣೆಗಳು ನಡೆಯುತ್ತಲೇ ಇರುತ್ತವೆ.

ನವದೆಹಲಿ: ಚುನಾವಣೆಗಳು ನಡೆಯುತ್ತಲೇ ಇರುತ್ತವೆ, ಆದರೆ ಸಂಸತ್ತಿನ ಬಜೆಟ್ ಅಧಿವೇಶನವು ಬಹಳ ಮಹತ್ವದ್ದಾಗಿದ್ದು, ಅದನ್ನು ಫಲಪ್ರದಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಾಕಷ್ಟು ಅವಕಾಶಗಳಿದ್ದು, ಭಾರತಕ್ಕೆ ಆರ್ಥಿಕ ಪ್ರಗತಿ, ಲಸಿಕೆ ಕಾರ್ಯಕ್ರಮದ ಮೂಲಕ ವಿಶ್ವದಲ್ಲಿ ವಿಶ್ವಾಸವನ್ನು ತುಂಬಲಾಗುತ್ತಿದೆ ಎಂದು ಪ್ರತಿಪಾದಿಸಿದರು.ಚುನಾವಣೆಗಳು ಅಧಿವೇಶನ ಮತ್ತು ಚರ್ಚೆಗಳ ಮೇಲೆ ಪರಿಣಾಮ ಬೀರುತ್ತವೆ ಎಂಬುದು ನಿಜ. ಆದರೆ ನಾನು ಎಲ್ಲಾ ಸಂಸದರನ್ನು ವಿನಂತಿಸುತ್ತೇನೆ, ಚುನಾವಣೆಗಳು ನಡೆಯುತ್ತವೆ ಆದರೆ ಬಜೆಟ್ ಅಧಿವೇಶನವು ಇಡೀ ವರ್ಷಕ್ಕೆ ನೀಲನಕ್ಷೆಯನ್ನು ಹಾಕಿ ಕೊಡುತ್ತದೆ. ಆದ್ದರಿಂದ ಇದು ಬಹಳ ಮುಖ್ಯವಾಗಿದೆ ಎಂದರು.“ನಾವು ಈ ಅಧಿವೇಶನವನ್ನು ಹೆಚ್ಚು ಫಲಪ್ರದಗೊಳಿಸುತ್ತೇವೆ, ಮುಂಬರುವ ವರ್ಷದಲ್ಲಿ ದೇಶವನ್ನು ಹೊಸ ಆರ್ಥಿಕ ಎತ್ತರಕ್ಕೆ ಕೊಂಡೊಯ್ಯಲು ಉತ್ತಮ ಅವಕಾಶವಿದೆ. ದೇಶವನ್ನು ಶೀಘ್ರವಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮುಕ್ತ ಮನಸ್ಸಿನಿಂದ ಚರ್ಚೆ ನಡೆಸುವಂತೆ ಮೋದಿ ಕರೆ ನೀಡಿದರು.ಉತ್ತರ ಪ್ರದೇಶ, ಪಂಜಾಬ್, ಮಣಿಪುರ, ಉತ್ತರಾಖಂಡ, ಗೋವಾ, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅಧಿವೇಶನ ನಡೆಯುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ.

Mon Jan 31 , 2022
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಗೊಂದಲ ಉಂಟಾಗಿತ್ತು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ, ಹೆಚ್ಚು ಮತ ಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.ಇದಾದ ಕಾಂಗ್ರೆಸ್‌ನ ಬಳಿಕ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ […]

Advertisement

Wordpress Social Share Plugin powered by Ultimatelysocial