ಪ್ರಸಿದ್ದ ಅಟ್ಲಾಸ್ ಕಂಪನಿ ಬಂದ್

ಭಾರತದಲ್ಲಿ ಮನೆಮಾತಾಗಿದ್ದ ಖ್ಯಾತ ‘ಅಟ್ಲಾಸ್’ ಸೈಕಲ್ ತಯಾರಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಬಾಗಿಲು ಮುಚ್ಚಿದೆ. ಉತ್ತರ ಪ್ರದೇಶದ ಘಾಝಿಯಾಬಾದ್‍ನಲ್ಲಿದ್ದ ಅತೀ ದೊಡ್ಡ ಫ್ಯಾಕ್ಟರಿ ಭಾರೀ ನಷ್ಟದ ಹಿನ್ನೆಲೆಯಲ್ಲಿ ಯಾವುದೇ ಸೂಚನೆ ನೀಡದೇ ಬಾಗಿಲು ಮುಚ್ಚಿದ್ದರಿಂದ ಸಾವಿರಕ್ಕೂ ಹೆಚ್ಚು ಮಂದಿ ನೌಕರರು ಬೀದಿಗೆ ಬಂದಿದ್ದಾರೆ. ಭಾರತದ ಅತೀ ದೊಡ್ಡ ಸೈಕಲ್ ತಯಾರಿಕಾ ಕಂಪೆನಿ ಎಂದು ಹೆಸರು ಮಾಡಿದ್ದಅಟ್ಲಾಸ್ ದೇಶದ ಬಹುತೇಕ ಮನೆಗಳಲ್ಲಿ ಇತ್ತು. ಕೋವಿಡ್ 19 ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಕಂಪನಿಯನ್ನು ಮುಚ್ಚಲಾಗಿತ್ತು. ಜೂನ್ 1 ರಂದು ಕಂಪನಿಯನ್ನು ತೆರೆಯಲಾಗಿತ್ತು. ನೌಕರರು ಸಂಭ್ರಮದಿಂದಲೇ ಕೆಲಸಕ್ಕೆ ಹಾಜರಾಗಿದ್ದರು. 2 ದಿನ ಕೆಲಸ ಮಾಡಿದ್ದ ನೌಕರರು, ಜೂನ್ 3 ರಂದು ಕೆಲಸಕ್ಕೆ ಬೆಳಗ್ಗೆ ತೆರಳಿದಾಗ ಕಂಪನಿಯ ಮುಖ್ಯ ದ್ವಾರದಲ್ಲಿದ್ದ ನೋಟಿಸ್ ನೋಡಿ ಶಾಕ್ ಆಗಿದ್ದಾರೆ. ಆರ್ಥಿಕ ನಷ್ಟ ಸರಿದೂಗಿಸಲು ಸಾಧ್ಯವಾಗದ ಕಾರಣ ಕಂಪನಿಯನ್ನು ಮುಚ್ಚಲಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿತ್ತು. ನೋಟಿಸ್ ನೀಡದೇ ಕಂಪನಿಯನ್ನು ಮುಚ್ಚಲಾಗಿದೆ. ದಿಢೀರ್ ಬಂದ್ ಮಾಡಿದರೆ ನಾವು ಮುಂದೆ ಏನು ಮಾಡಬೇಕು ಎಂದು ನೌಕರರು ಕಣ್ಣೀರು ಹಾಕಿದ್ದಾರೆ. ನೌಕರರು ಈಗ ಕೋರ್ಟ್ ಮೊರೆ ಹೋಗಿದ್ದು, ಶುಕ್ರವಾರ ಅರ್ಜಿ ವಿಚಾರಣೆಗೆ ಬರಲಿದೆ.

Please follow and like us:

Leave a Reply

Your email address will not be published. Required fields are marked *

Next Post

ಸರಕಾರಿ ಹೊಸ ಯೋಜನೆಗಳಿಗೆ ಬ್ರೇಕ್

Fri Jun 5 , 2020
ನವದೆಹಲಿ : ಲಾಕ್ ಡೌನ್ ನಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಕಾರಣದಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ, ಆತ್ಮ ನಿರ್ಭರ್ ಭಾರತ ಅಡಿ ಯೋಜನೆಗಳನ್ನು ಮಾತ್ರವೇ ಆರಂಭಿಸಬೇಕು. ಇತರೆ ಬೇರಾವುದೇ ಯೋಜನೆಗಳನ್ನು ಆರಂಭಿಸದಂತೆ ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಹೊಸ ಯೋಜನೆಗಳಿಗೆ ಬ್ರೇಕ್ ಹಾಕಿದೆ. ದೇಶದಲ್ಲಿ ಕೊರೋನಾದಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಯಾವುದೇ ಹೊಸ ಯೋಜನೆ ಜಾರಿ […]

Advertisement

Wordpress Social Share Plugin powered by Ultimatelysocial