ಪ್ರಸಿದ್ದ ಗಾಯಕ ಸೋನು ನಿಗಮ್ ಮತ್ತು ತಂಡದ ಮೇಲೆ ಹಲ್ಲೆಗೆ ಯತ್ನ !

ಮುಂಬೈ: ಪ್ರಸಿದ್ದ ಗಾಯಕ ಸೋನು ನಿಗಮ್ ಮತ್ತು ತಂಡದ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಮುಂಬೈನ ಚೆಂಬೂರ್ ನಲ್ಲಿ ನಡೆದ ಕಾರ್ಯಕ್ರಮದ ವೇಲೆ ಅನುಚಿತ ವರ್ತನೆ ತೋರಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು ಸೋನು ಅವರ ತಂಡದವರು ಎಂದು ಹೇಳಲಾದ ವ್ಯಕ್ತಿಯನ್ನು ವೇದಿಕೆಯಿಂದ ಕೆಳಕ್ಕೆ ತಳ್ಳಿರುವುದನ್ನು ತೋರಿಸುತ್ತದೆ.

ಶಿವಸೇನಾ (ಯುಬಿಟಿ) ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ ಗೆ ಬಂದಿದ್ದರು. ಅವರು ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

“ಸೋನು ನಿಗಮ್ ವೇದಿಕೆಯಿಂದ ಕೆಳಗಿಳಿಯುತ್ತಿದ್ದಾಗ ಕೆಲವರು ಸೆಲ್ಫಿ ತೆಗೆದುಕೊಳ್ಳಲು ಮುಂದಾದರು, ಆ ಸಮಯದಲ್ಲಿ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು, ಈ ವೇಳೆ ಅಕಸ್ಮಾತಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಳ್ಳಲಾಯಿತು, ಅಪಾಯವೇನೂ ಆಗಿಲ್ಲ” ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.

ಈತನ್ಮಧ್ಯೆ ಫಾಟರ್‌ಪೇಕರ್ ಅವರ ಮಗ ತಮ್ಮ ಮ್ಯಾನೇಜರ್‌ ನೊಂದಿಗೆ ಅನುಚಿತವಾಗಿ ವರ್ತಿಸಿ, ವೇದಿಕೆಯಿಂದ ಹೊರಹೋಗುವಂತೆ ಹೇಳಿದರು ಎಂದು ಸೋನು ನಿಗಮ್ ಅವರ ತಂಡವು ಆರೋಪಿಸಿದೆ.

“ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿಯನ್ನು ತಳ್ಳಿ ನಂತರ ಸೋನು ಅವರನ್ನು ತಳ್ಳಿದ್ದಾರೆ. ಈ ವೇಳೆ ರಬ್ಬಾನಿ ಖಾನ್ ಕೂಡ ಇದ್ದರು. ಗಲಾಟೆಯಲ್ಲಿ ಅವರು ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಅವರು ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಬೆಂಕಿ...ಕಿಡಿಗೇಡಿಗಳ ದುಷ್ಕೃತ್ಯದ ಶಂಕೆ.

Tue Feb 21 , 2023
ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯದ ಶಂಕೆ… ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಆಟೋದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕ್ಷಣ ಮಾತ್ರದಲ್ಲಿ ಆಟೋ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ವ್ಯಾಪಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.ಸಿದ್ದಪ್ಪ ವೃತ್ತದ ಬಳಿ ಇರುವ ರಸ್ತೆಯಲ್ಲಿ ಘಟನೆ ನಡೆದಿದೆ.ರವೀಂದ್ರ ಎಂಬುವರಿಗೆ ಸೇರಿದ ಪ್ಯಾಸೆಂಜರ್ ಆಟೋ ಸಂಪೂರ್ಣ ನಾಶವಾಗಿದೆ. ಕಿಡಿಗೇಡಿಗಳ […]

Advertisement

Wordpress Social Share Plugin powered by Ultimatelysocial