ಪ್ರಾಣಿಗಳನ್ನು ದತ್ತು ಪಡೆಯಲು ವಿಶೇಷ ಪ್ಯಾಕೇಜ್

ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಲಾಕ್ ಡೌನ್ ಪರಿಣಾಮ ಸದ್ಯ ಉದ್ಯಾನಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಪ್ರಾಣಿಗಳನ್ನು ದತ್ತು ಪಡೆಯುವ ಮೊತ್ತದ ಆಧಾರದ ಮೇಲೆ ಗಿಫ್ಟ್ ವೋಚರ್, ನಾಮಫಲಕದಲ್ಲಿ ಹೆಸರು ಪ್ರದರ್ಶನ ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಯಾವ ಪ್ರಾಣಿಗಳನ್ನು ದತ್ತು ಪಡೆಯಬಹುದು ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕಾಳಿಂಗ ಸರ್ಪ, ಹೆಬ್ಬಾವುಗಳನ್ನು ವಾರ್ಷಿಕ ೩,೫೦೦, ಭಾರತೀಯ ಚಿರತೆ ೩೫,೦೦೦, ಜೀಬ್ರಾ ೫೦,೦೦೦, ಬಂಗಾಳದ ಹುಲಿ ಮತ್ತು ಜಿರಾಫೆಗೆ ೧ ಲಕ್ಷ ರೂ. ದತ್ತು ಪಡೆಯುವ ದರ ನಿಗದಿ ಮಾಡಲಾಗಿದೆ. ಆನೆ ದತ್ತು ಪಡೆಯಲು ೧.೫ ಲಕ್ಷ ನೀಡಬೇಕಿದೆ. ಪ್ರಾಣಿಗಳ ರಕ್ಷಣೆ ಬಗ್ಗೆ ಅರಿವು ಮೂಡಿಸುವುದು, ಉದ್ಯಾನವನದ ಚಟುವಟಿಕೆಗಳಲ್ಲಿ ಜನರನ್ನು ತೊಡಗಿಸಿಕೊಳ್ಳಲು ದತ್ತು ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಇದು ಕೇವಲ ಆದಾಯಗಳಿಸುವ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಬನ್ನೇರುಘಟ್ಟಕ್ಕೆ ವಾರ್ಷಿಕ ಸುಮಾರು ೧೫ ಲಕ್ಷ ಜನರು ಭೇಟಿ ನೀಡುತ್ತಾರೆ. ಈ ವರ್ಷದ ಜನವರಿ ೧ ರಂದು ೨೩ ಸಾವಿರ ಜನರು ಭೇಟಿ ನೀಡಿದ್ದರು. ಈಗ ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ಪ್ರವಾಸಿಗರ ಭೇಟಿ ರದ್ದಾಗಿದೆ. ಲಾಕ್ ಡೌನ್ ಮುಗಿದ ಬಳಿಕ ತಕ್ಷಣ ಉದ್ಯಾನವನವನ್ನು ತಕ್ಷಣ ತೆರೆಯುವುದಿಲ್ಲ. ನಾವು ಪರಿಸ್ಥಿತಿಯನ್ನು ಮೊದಲು ಅವಲೋಕಿಸುತ್ತೇವೆ. ಪ್ರವಾಸಿಗರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರಿಗಾಗಿ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತದೆ. ಏನು ಮಾಡಬಹುದು, ಏನು ಮಾಡಬಾರದು? ಎಂದು ಈ ಮೂಲಕ ಅವರಿಗೆ ಅರಿವು ಮೂಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನಿಸಾರ್ ಅಹಮದ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ

Sun May 3 , 2020
ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿರುವ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ನಿಸಾರ್ ಅಹಮದ್ ಅವರು ಕನ್ನಡ ಸಾರಸ್ವತ ಲೋಕದ ದಿಗ್ಗಜ. ನಮ್ಮ ನಾಡನ್ನು ನಿತ್ಯೋತ್ಸವ ಗೀತೆ ಮೂಲಕ ಅದ್ಭುತವಾಗಿ ವರ್ಣಿಸಿ ನಿತ್ಯೋತ್ಸವ ಕವಿ ಎಂದು ಖ್ಯಾತಿ ಪಡೆದವರು. ಅವರ ಅಗಲಿಕೆ ಸುದ್ದಿ ಬೇಸರ ತಂದಿದೆ. ನಿಸಾರ್ ಅಹಮದ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಕೊಡುಗೆ ಅಪಾರ. ಮನಸು ಗಾಂಧಿಬಜಾರು, ನಿತ್ಯೋತ್ಸವ […]

Related posts

Advertisement

Wordpress Social Share Plugin powered by Ultimatelysocial