ಪ್ರಾಣಿಗಳಿಂದ ಸಾಮಾಜಿಕ ಅಂತರದ ಪಾಠ

ಅರುಣಾಚಲ ಪ್ರದೇಶ: ಜಾಗತಿಕ ಪಿಡುಗು ಕೋವಿಡ್-೧೯ ಸೋಂಕು ಭೀತಿಯಿಂದಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಆದರೂ ಅದನ್ನು ನಾವು ಹಲವು ಸಂದರ್ಭಗಳಲ್ಲಿ ಸ್ಪಷ್ಟವಾಗಿ ಉಲ್ಲಂಘಿಸಿದ್ದೇವೆ. ಆದರೆ, ಕ್ರೀಡಾ ಸಚಿವ ಕಿರಣ್ ರಿಜುಜು ಹಂಚಿಕೊAಡಿರುವ ಮಂಗಗಳ ಚಿತ್ರವೊಂದು ನಮ್ಮ ತಪ್ಪಿನ ಅರಿವಾಗುವಂತೆ ಮಾಡುತ್ತಿದೆ.
ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳ ಗಡಿ ಭಾಗದಲ್ಲಿರುವ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಮಂಗಗಳಿಗೆ ಕಲ್ಲಂಗಡಿ ಮತ್ತು ಬಾಳೆ ಹಣ್ಣು ನೀಡುತ್ತಿದ್ದಾರೆ. ಈ ವೇಳೆ ಹಣ್ಣು ತಿನ್ನಲು ಮುಗಿಬೀಳದ ಮಂಗಗಳು ಪರಸ್ಪರ ಸಾಕಷ್ಟು ಅಂತರದಲ್ಲಿಯೇ ಉಳಿದಿರುವುದು ಚಿತ್ರದಲ್ಲಿ ಸೆರೆಯಾಗಿದೆ. ಆರುಪ್ ಕಲಿಟಾ ಎನ್ನುವವರು ತೆಗೆದಿರುವ ಈ ಚಿತ್ರವನ್ನು ಕಿರಣ್ ರಿಜುಜು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊAಡಿದ್ದಾರೆ. ರಿಜುಜು ಚಿತ್ರದ ಜೊತೆಗೆ, ‘ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿ ಅರುಣಾಚಲ ಪ್ರದೇಶದ ಭಾಲುಕ್‌ಪಾಂಗ್ ಬಳಿ ಕಂಡುಬAದ ಪರಿಪೂರ್ಣ ಸಾಮಾಜಿಕ ಅಂತರದ ಚಿತ್ರವಿದು. ನಾವು ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸಾಮಾನ್ಯ ದೈನಂದಿನ ಜೀವನದಲ್ಲಿ ನಾವು ಪಾಲಿಸದಿರುವ ಅನೇಕ ಪ್ರಮುಖ ಪಾಠಗಳನ್ನು ಈ ಪ್ರಾಣಿಗಳು ನಮಗೆ ಬೋಧಿಸುತ್ತವೆ’ ಎಂದು ಬರೆದುಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಯಶ್ ಪುತ್ರನ ಪೋಟೋ ರಿವೀಲ್

Thu Apr 30 , 2020
ಲಾಕ್ ಡೌನ್ ನಡುವೆ ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ.ಇಂದು ಜೂನಿಯರ್ ರಾಕಿಭಾಯ್ ದರ್ಶನವಾಗಲಿದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ದಂಪತಿಯ ಎರಡನೆ ಪುತ್ರ ಹೇಗಿದ್ದಾನೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಇದುವರೆಗೂ ಯಶ್ ದಂಪತಿ ಪುತ್ರನ ಫೋಟೋವನ್ನು ಎಲ್ಲಿಯೂ ರಿವೀಲ್ ಮಾಡಿಲ್ಲ. ಆದರೀಗ ಅಭಿಮಾನಿಗಳಿಗೆ ಮುದ್ದಿನ ಮಗನನ್ನು ದರ್ಶನ ಮಾಡಿಸಲು ಸಜ್ಜಾಗಿದ್ದಾರೆ.ಇಂದು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುವುದಾಗಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಮಗಳ […]

Advertisement

Wordpress Social Share Plugin powered by Ultimatelysocial