ಒಂದು ವಾರಗಳ ಕಾಲ ಪಟ್ಟಣವನ್ನ ಕಂಪ್ಲೀಟ್ ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಎಸ್ ಎನ್ ನಾರಾಯಣ ಸ್ವಾಮಿ ಹೇಳಿದ್ದಾರೆ. ಬಂಗಾರಪೇಟೆಯಲ್ಲಿ ಮತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದೆ, ಇದುವರೆಗೂ ತಾಲೂಕಿನಲ್ಲಿ ೪ ಕೋವಿಡ್ ಸೋಕಿನ ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಅಲವು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಉಳಿದ ಪ್ರಕರಣಗಳ ವರದಿ ಬರಬೇಕಿದೆ. ತಾಲೂಕಿನ ಆಡಳಿತ ಮಂಡಳಿ ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರವನ್ನು ಕೊಡಬೇಕು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು, ಮಾಸ್ಕ್ ಧÀರಿಸಿಬೇಕು. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡದೆ. ಮಹಾಮಾರಿ ಕೊರೊನಾ ವಿರುದ್ಧ ಹೋರಾಡಬೇಕಿದೆ, ಅನಾವಶ್ಯಕವಾಗಿ ಓಡಾಡಬಾರದು, ಮನೆಯಲ್ಲೇ ಇದ್ದು ಪ್ರತಿಯೊಬ್ಬರು ಸಹಕರಿಸಬೇಕು ಎಂದು ಹೇಳಿದರು.
ಬಂಗಾರಪೇಟೆ ಒಂದು ವಾರ ಲಾಕ್ ಡೌನ್
Please follow and like us: